ಬ್ರೇಕಿಂಗ್ ನ್ಯೂಸ್
01-01-22 04:03 pm HK Desk news ಕರಾವಳಿ
ಉಡುಪಿ, ಜ.1 : ಕೊರಗ ಸಮುದಾಯದ ಮೆಹಂದಿ ಪಾರ್ಟಿ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ದೈಹಿಕ ದೌರ್ಜನ್ಯ ನಡೆಸಿರುವ ಘಟನೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾಡಳಿತದಿಂದ ವರದಿ ಕೇಳಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಂದ ಘಟನೆ ಬಗ್ಗೆ ಮಾಹಿತಿ ಕೇಳಿ ಆಯೋಗ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಪೊಲೀಸರು ಅಮಾಯಕ ಕೊರಗ ಸಮುದಾಯದ ಮೇಲೆ ಹಲ್ಲೆ ನಡೆಸಿರುವುದರಿಂದ ಜಿಲ್ಲೆಯ ಜನತೆಗೆ ಪೊಲೀಸರ ಮೇಲೆ ನಂಬಿಕೆ ಕುಸಿಯುವಂತಾಗಿದೆ. ಜನರನ್ನು ರಕ್ಷಣೆ ಮಾಡಬೇಕಾದವರು ಈ ರೀತಿ ವರ್ತಿಸಿದ್ದು ಸಮಾಜಕ್ಕೆ ತದ್ವಿರುದ್ಧ ಸಂದೇಶ ಹೋಗುವಂತಾಗಿದೆ. ಈ ಬಗ್ಗೆ ಎಸ್ಪಿ ಬಳಿ ವರದಿ ಕೇಳಿದ್ದೇವೆ. ಘಟನೆ ಬಗ್ಗೆ ಪರಾಮರ್ಶೆ ನಡೆಸಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


ಡಿ.27ರಂದು ರಾತ್ರಿ ಕೋಟತ್ತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯೊಂದರಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಹಾಕಿದ್ದಾರೆಂದು ನೀಡಿದ್ದ ಸಾರ್ವಜನಿಕ ದೂರು ಆಧರಿಸಿ ತೆರಳಿದ್ದ ಕೋಟ ಠಾಣೆ ಪೊಲೀಸರು ಮದುಮಗ ಸೇರಿದಂತೆ ಕೊರಗ ಕಾಲನಿಯ ನಿವಾಸಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು. ಈ ವೇಳೆ, ಮಹಿಳೆಯರು, ವೃದ್ಧರ ಮೇಲೂ ಲಾಠಿ ಏಟು ಬಿದ್ದಿತ್ತು ಎಂದು ಆರೋಪಿಸಲಾಗಿತ್ತು.

ಘಟನೆ ಭಾರೀ ವಿವಾದ ಪಡೆಯುತ್ತಲೇ ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದರು. ಎಸ್ಪಿ ನೀಡಿದ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಕೋಟ ಠಾಣೆ ಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಿದ್ದರು. ಘಟನೆ ರಾಜ್ಯದ ಗಮನ ಸೆಳೆದಿದ್ದು, ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಊರಲ್ಲೇ ಈ ರೀತಿ ನಡೆದಿದ್ದನ್ನು ಟೀಕಿಸಿದ್ದರು.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
The lathi-charge and subsequent physical harassment in police station, done by Kota police on the Koraga community of Kotathattu gram panchayat limits, has drawn the attention of National Commission for Women (NCW). The commission has sought explanation from SP Vishnuvardhan of the district on the issue
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm