ಬ್ರೇಕಿಂಗ್ ನ್ಯೂಸ್
02-01-22 02:00 pm Mangalore Correspondent ಕರಾವಳಿ
ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm