ಬ್ರೇಕಿಂಗ್ ನ್ಯೂಸ್
02-01-22 10:59 pm Mangalore Correspondent ಕರಾವಳಿ
ಮಂಗಳೂರು, ಜ.2 : ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡೂ ಕಾಲುಗಳನ್ನು ಕಳಕೊಂಡಿದ್ದ 21ರ ಹರೆಯದ ಯುವಕ ಕೊನೆಗೂ ಬದುಕಿ ಬರಲಿಲ್ಲ. ಕಾಲು ಕಳಕೊಂಡ ಬಳಿಕ ಮಾನಸಿಕವಾಗಿ ತೀವ್ರ ಆಘಾತ ಅನುಭವಿಸಿದ್ದ ಚೇತನ್ ಇಂದು ಕೊನೆಯುಸಿರು ಎಳೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳ ಕೊನೆಯಲ್ಲಿ ಜೋಕಟ್ಟೆ ಬಳಿಯ ಅಂಗರಗುಂಡಿ ಎಂಬಲ್ಲಿ ದುರಂತ ನಡೆದಿತ್ತು. ತನ್ನ ಮನೆಯಿಂದ ಜೋಕಟ್ಟೆಯ ರೈಲ್ವೇ ಗೇಟನ್ನು ದಾಟಿಕೊಂಡು ಬಸ್ಸಿನ ನಿರ್ವಾಹಕನ ಕೆಲಸಕ್ಕೆ ಓಡುತ್ತಿದ್ದ ಚೇತನ್, ರೈಲು ಬರುತ್ತಿದ್ದ ಹಳಿಯಲ್ಲಿ ಆಡಿನ ಮರಿ ಇದ್ದುದನ್ನು ನೋಡಿ ಅದರ ರಕ್ಷಣೆಗೆ ಧಾವಿಸಿದ್ದರು. ಆಡಿನ ಮರಿಯನ್ನು ಹೊರಗೆಸೆದು ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಆತನ ಎರಡೂ ಕಾಲುಗಳ ಮೇಲಿನಿಂದ ಸಾಗಿತ್ತು. ಕೂಡಲೇ ಕಾಲಿನ ಜೊತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಚೇತನ್ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಕಾಲು ಜೋಡಣೆ ಸಾಧ್ಯವಾಗಿರಲಿಲ್ಲ.

ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಬಸ್ಸಿನ ಸಿಬಂದಿ, ಜೋಕಟ್ಟೆಯ ಯುವಕರು ಭಿಕ್ಷೆ ಎತ್ತಿ ಚೇತನ್ ಚಿಕಿತ್ಸೆಗಾಗಿ ಹಣ ಒಟ್ಟು ಮಾಡಿದ್ದರು. ನಡುವೆ ಸ್ವಲ್ಪ ಚೇತರಿಸಿಕೊಂಡಿದ್ದ ಚೇತನ್ ಒಮ್ಮೆ ಮನೆಗೂ ಬಂದಿದ್ದ. ಆನಂತರ ಮಾನಸಿಕವಾಗಿ ಕುಗ್ಗಿದ ಚೇತನ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ.2ರಂದು ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ತಂಗಿಯರನ್ನು ಹೊಂದಿದ್ದ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಚುರುಕಿನ ಹುಡುಗ ಚೇತನ್ ಅಗಲಿಕೆ ಸ್ಥಳೀಯ ಯುವಕರಲ್ಲಿ ಶೋಕ ಸಾಗರ ಸೃಷ್ಟಿಸಿದೆ.
ಜೋಕಟ್ಟೆ ; ರೈಲಿನಡಿಗೆ ಬೀಳುತ್ತಿದ್ದ ಆಡಿನ ಮರಿ ರಕ್ಷಿಸಲು ಹೋಗಿದ್ದ ಯುವಕ ತಂದುಕೊಂಡ ದುರಂತ !
Mangalore 21 year old bus conductor who saved goat from train accident dies at hospital after six months of suffering. Cheatan had lost both his legs in train accident after he went to save the goats on the track at Jokatte.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm