ಬ್ರೇಕಿಂಗ್ ನ್ಯೂಸ್
02-01-22 10:59 pm Mangalore Correspondent ಕರಾವಳಿ
ಮಂಗಳೂರು, ಜ.2 : ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡೂ ಕಾಲುಗಳನ್ನು ಕಳಕೊಂಡಿದ್ದ 21ರ ಹರೆಯದ ಯುವಕ ಕೊನೆಗೂ ಬದುಕಿ ಬರಲಿಲ್ಲ. ಕಾಲು ಕಳಕೊಂಡ ಬಳಿಕ ಮಾನಸಿಕವಾಗಿ ತೀವ್ರ ಆಘಾತ ಅನುಭವಿಸಿದ್ದ ಚೇತನ್ ಇಂದು ಕೊನೆಯುಸಿರು ಎಳೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳ ಕೊನೆಯಲ್ಲಿ ಜೋಕಟ್ಟೆ ಬಳಿಯ ಅಂಗರಗುಂಡಿ ಎಂಬಲ್ಲಿ ದುರಂತ ನಡೆದಿತ್ತು. ತನ್ನ ಮನೆಯಿಂದ ಜೋಕಟ್ಟೆಯ ರೈಲ್ವೇ ಗೇಟನ್ನು ದಾಟಿಕೊಂಡು ಬಸ್ಸಿನ ನಿರ್ವಾಹಕನ ಕೆಲಸಕ್ಕೆ ಓಡುತ್ತಿದ್ದ ಚೇತನ್, ರೈಲು ಬರುತ್ತಿದ್ದ ಹಳಿಯಲ್ಲಿ ಆಡಿನ ಮರಿ ಇದ್ದುದನ್ನು ನೋಡಿ ಅದರ ರಕ್ಷಣೆಗೆ ಧಾವಿಸಿದ್ದರು. ಆಡಿನ ಮರಿಯನ್ನು ಹೊರಗೆಸೆದು ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಆತನ ಎರಡೂ ಕಾಲುಗಳ ಮೇಲಿನಿಂದ ಸಾಗಿತ್ತು. ಕೂಡಲೇ ಕಾಲಿನ ಜೊತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಚೇತನ್ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಕಾಲು ಜೋಡಣೆ ಸಾಧ್ಯವಾಗಿರಲಿಲ್ಲ.

ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಬಸ್ಸಿನ ಸಿಬಂದಿ, ಜೋಕಟ್ಟೆಯ ಯುವಕರು ಭಿಕ್ಷೆ ಎತ್ತಿ ಚೇತನ್ ಚಿಕಿತ್ಸೆಗಾಗಿ ಹಣ ಒಟ್ಟು ಮಾಡಿದ್ದರು. ನಡುವೆ ಸ್ವಲ್ಪ ಚೇತರಿಸಿಕೊಂಡಿದ್ದ ಚೇತನ್ ಒಮ್ಮೆ ಮನೆಗೂ ಬಂದಿದ್ದ. ಆನಂತರ ಮಾನಸಿಕವಾಗಿ ಕುಗ್ಗಿದ ಚೇತನ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ.2ರಂದು ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ತಂಗಿಯರನ್ನು ಹೊಂದಿದ್ದ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಚುರುಕಿನ ಹುಡುಗ ಚೇತನ್ ಅಗಲಿಕೆ ಸ್ಥಳೀಯ ಯುವಕರಲ್ಲಿ ಶೋಕ ಸಾಗರ ಸೃಷ್ಟಿಸಿದೆ.
ಜೋಕಟ್ಟೆ ; ರೈಲಿನಡಿಗೆ ಬೀಳುತ್ತಿದ್ದ ಆಡಿನ ಮರಿ ರಕ್ಷಿಸಲು ಹೋಗಿದ್ದ ಯುವಕ ತಂದುಕೊಂಡ ದುರಂತ !
Mangalore 21 year old bus conductor who saved goat from train accident dies at hospital after six months of suffering. Cheatan had lost both his legs in train accident after he went to save the goats on the track at Jokatte.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm