ಬ್ರೇಕಿಂಗ್ ನ್ಯೂಸ್
02-01-22 10:59 pm Mangalore Correspondent ಕರಾವಳಿ
ಮಂಗಳೂರು, ಜ.2 : ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡೂ ಕಾಲುಗಳನ್ನು ಕಳಕೊಂಡಿದ್ದ 21ರ ಹರೆಯದ ಯುವಕ ಕೊನೆಗೂ ಬದುಕಿ ಬರಲಿಲ್ಲ. ಕಾಲು ಕಳಕೊಂಡ ಬಳಿಕ ಮಾನಸಿಕವಾಗಿ ತೀವ್ರ ಆಘಾತ ಅನುಭವಿಸಿದ್ದ ಚೇತನ್ ಇಂದು ಕೊನೆಯುಸಿರು ಎಳೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳ ಕೊನೆಯಲ್ಲಿ ಜೋಕಟ್ಟೆ ಬಳಿಯ ಅಂಗರಗುಂಡಿ ಎಂಬಲ್ಲಿ ದುರಂತ ನಡೆದಿತ್ತು. ತನ್ನ ಮನೆಯಿಂದ ಜೋಕಟ್ಟೆಯ ರೈಲ್ವೇ ಗೇಟನ್ನು ದಾಟಿಕೊಂಡು ಬಸ್ಸಿನ ನಿರ್ವಾಹಕನ ಕೆಲಸಕ್ಕೆ ಓಡುತ್ತಿದ್ದ ಚೇತನ್, ರೈಲು ಬರುತ್ತಿದ್ದ ಹಳಿಯಲ್ಲಿ ಆಡಿನ ಮರಿ ಇದ್ದುದನ್ನು ನೋಡಿ ಅದರ ರಕ್ಷಣೆಗೆ ಧಾವಿಸಿದ್ದರು. ಆಡಿನ ಮರಿಯನ್ನು ಹೊರಗೆಸೆದು ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಆತನ ಎರಡೂ ಕಾಲುಗಳ ಮೇಲಿನಿಂದ ಸಾಗಿತ್ತು. ಕೂಡಲೇ ಕಾಲಿನ ಜೊತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಚೇತನ್ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಕಾಲು ಜೋಡಣೆ ಸಾಧ್ಯವಾಗಿರಲಿಲ್ಲ.
ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಬಸ್ಸಿನ ಸಿಬಂದಿ, ಜೋಕಟ್ಟೆಯ ಯುವಕರು ಭಿಕ್ಷೆ ಎತ್ತಿ ಚೇತನ್ ಚಿಕಿತ್ಸೆಗಾಗಿ ಹಣ ಒಟ್ಟು ಮಾಡಿದ್ದರು. ನಡುವೆ ಸ್ವಲ್ಪ ಚೇತರಿಸಿಕೊಂಡಿದ್ದ ಚೇತನ್ ಒಮ್ಮೆ ಮನೆಗೂ ಬಂದಿದ್ದ. ಆನಂತರ ಮಾನಸಿಕವಾಗಿ ಕುಗ್ಗಿದ ಚೇತನ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ.2ರಂದು ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ತಂಗಿಯರನ್ನು ಹೊಂದಿದ್ದ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಚುರುಕಿನ ಹುಡುಗ ಚೇತನ್ ಅಗಲಿಕೆ ಸ್ಥಳೀಯ ಯುವಕರಲ್ಲಿ ಶೋಕ ಸಾಗರ ಸೃಷ್ಟಿಸಿದೆ.
ಜೋಕಟ್ಟೆ ; ರೈಲಿನಡಿಗೆ ಬೀಳುತ್ತಿದ್ದ ಆಡಿನ ಮರಿ ರಕ್ಷಿಸಲು ಹೋಗಿದ್ದ ಯುವಕ ತಂದುಕೊಂಡ ದುರಂತ !
Mangalore 21 year old bus conductor who saved goat from train accident dies at hospital after six months of suffering. Cheatan had lost both his legs in train accident after he went to save the goats on the track at Jokatte.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm