ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am