ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am