ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm