ಬ್ರೇಕಿಂಗ್ ನ್ಯೂಸ್
05-01-22 08:38 pm HK Desk news ಕರಾವಳಿ
ಸುಬ್ರಹ್ಮಣ್ಯ, ಜ.5 : ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಸೂಚನೆಯಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದುಪಡಿಸಲಾಗಿದೆ. ಜ.6 ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಭಾನುವಾರ ದರುಶನವೂ ಇಲ್ಲ !
ಇದಲ್ಲದೆ, ದೇವರ ದರ್ಶನಕ್ಕೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು. ಶ್ರೀ ದೇವಳದಲ್ಲಿ ಸಂಬಂಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜೆ ಎಂದಿನಂತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ
ದೇಗುಲದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
Mangalore Rise in Omicron cases all services at Kukke Shri Subramanya Temple to be closed, only entry for darshan for devotees allowed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm