ಬ್ರೇಕಿಂಗ್ ನ್ಯೂಸ್
06-01-22 03:48 pm Mangalore Correspondent ಕರಾವಳಿ
ಮಂಗಳೂರು, ಜ.6 : ಓಮಿಕ್ರಾನ್ ಹೆಸರಲ್ಲಿ ರಾಜ್ಯ ಸರಕಾರ ವೀಕೆಂಡಲ್ಲಿ ಎರಡು ದಿನ ಕರ್ಫ್ಯೂ ವಿಧಿಸಿದೆ. ಅದರಂತೆ, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಇದ್ದು, ಜನರು ಹೊರಗೆ ಓಡಾಡುವಂತಿಲ್ಲ ಎಂದು ರಾಜ್ಯ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಡಳಿತ, ವೀಕೆಂಡ್ ಕರ್ಫ್ಯೂ ಇದ್ದರೂ ಬಸ್, ಸಾರಿಗೆ ವಾಹನಗಳು ಓಡಾಡಬಹುದು. ಅಗತ್ಯ ಸಾಮಗ್ರಿಗಳ ಅಂಗಡಿಯನ್ನು ತೆರೆದಿಡಬಹುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ಸಾರ್ವಜನಿಕರ ತುರ್ತು ಓಡಾಟಕ್ಕೆ ಅವಕಾಶ ನೀಡುವ ಸಲುವಾಗಿ ಸಾರಿಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಅಗತ್ಯ ಸಾಮಗ್ರಿಗಳ ಅಂಗಡಿ, ವ್ಯಾಪಾರ ಸಂಸ್ಥೆಗಳನ್ನೂ ತೆರೆದಿಡಲು ಅವಕಾಶ ಇದೆ. ಸಾರ್ವಜನಿಕರು ತಮ್ಮ ಮನೆಯ ಬಳಿಯಲ್ಲೇ ಆದಷ್ಟು ಅಂಗಡಿಗೆ ತೆರಳಬೇಕು. ಆಮೂಲಕ ಸಾರ್ವಜನಿಕ ಸಂಚಾರಕ್ಕೆ ನಿಯಂತ್ರಣ ಹೇರಿ, ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ವೀಕೆಂಡಲ್ಲಿ ಶಾಲೆ, ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳು ರಜೆ ನೀಡಬೇಕು. ಪರೀಕ್ಷೆ ನಡೆಯುತ್ತಿದ್ದರೆ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಸಂಚಾರ ನಡೆಸಬಹುದು. ಈಗಾಗ್ಲೇ ನಿಗದಿಯಾಗಿರುವ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶ ಇರುತ್ತದೆ. ಆದರೆ ಸರಕಾರದ ಮಾರ್ಗಸೂಚಿಯಂತೆ 200 ಜನರಿಗೆ ಸೀಮಿತಗೊಳಿಸಬೇಕು ಎಂದಿದ್ದಾರೆ. ಅಲ್ಲದೆ, ಜನರು ಸ್ವಯಂಪ್ರೇರಿತರಾಗಿ ಕೋವಿಡ್ ವೈರಸ್ ಹರಡದಂತೆ ಜಾಗ್ರತೆ ವಹಿಸಬೇಕು. ಜನರು ಸ್ವಯಂ ಜಾಗೃತಿಯ ಮೂಲಕ ಲಾಕ್ಡೌನ್ ರೀತಿಯ ನಿರ್ಬಂಧ ಎದುರಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ
ವೀಕೆಂಡ್ ಕರ್ಫ್ಯೂ ವಿಧಿಸಿ ಜನರ ಸಂಚಾರವನ್ನು ಎರಡು ದಿನ ನಿರ್ಬಂಧಿಸುವ ಉದ್ದೇಶ ರಾಜ್ಯ ಸರಕಾರದ್ದಾಗಿದ್ದರೂ, ಜಿಲ್ಲಾಡಳಿತ ಜನರ ಸಂಚಾರಕ್ಕೆ ಸಾರಿಗೆ ವಾಹನಗಳಿಗೆ ಅವಕಾಶ ಕೊಟ್ಟು ಅಂಗಡಿಗಳನ್ನು ತೆರೆದಿಟ್ಟು ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಸರಕಾರಿ ಕಚೇರಿಯನ್ನು ತೆರೆದಿಟ್ಟು ಜನರ ಓಡಾಟಕ್ಕೆ ಅವಕಾಶ ನೀಡುವುದಾದರೆ, ಖಾಸಗಿ ಕಚೇರಿ, ವ್ಯಾಪಾರ ಸಂಸ್ಥೆಗಳನ್ನು ಮಾತ್ರ ನಿರ್ಬಂಧಿಸಿದ ಮಾತ್ರಕ್ಕೆ ವೈರಸ್ ಹರಡುವುದಕ್ಕೆ ಬ್ರೇಕ್ ಬೀಳುತ್ತಾ ಅನ್ನುವ ಪ್ರಶ್ನೆಗೆ ಉತ್ತರ ಇಲ್ಲ.
Private buses and stores opened in Mangalore weekend Curfew states DC Rajendra. As per the new guidelines, a weekend curfew will be implemented in the state from Friday 10:00 pm to Monday 5:00 am for the next two weeks.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm