ಬ್ರೇಕಿಂಗ್ ನ್ಯೂಸ್
10-01-22 10:24 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.10 : ಸೋಮೇಶ್ವರ ಗ್ರಾಮದ ಪಿಲಾರಿನಲ್ಲೀಗ ಸರ್ಪಗಳ ಹಾವಳಿ ಶುರುವಾಗಿದ್ದು ಮನೆಗೆ ಬಂದ ಸರ್ಪವನ್ನ ಹಿಡಿಯಲು ಹೋದ ಮಾಜಿ ಯೋಧನಿಗೆ ಹಾವು ಕಡಿದ ಘಟನೆ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಾಜಿ ಯೋಧ ಸದಾನಂದ ಗಟ್ಟಿ ಯಾನೆ ಬಾಬು ಗಟ್ಟಿ ಎಂಬವರು ಹಾವಿಂದ ಕಡಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಪೊದೆಗಳನ್ನ ಕಡಿದು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸಲಾಗಿದೆ. ಅನೇಕ ವರುಷಗಳಿಂದ ಇದ್ದ ಪೊದೆಗಳನ್ನ ಏಕಾಏಕಿ ಕಡಿದು ಸಮತಟ್ಟುಗೊಳಿಸಿದ ಪರಿಣಾಮ ಅಲ್ಲಿದ್ದ ಬೃಹದಾಕಾರದ ಸರ್ಪಗಳು ದಿಕ್ಕಾಪಾಲಾಗಿ ನೆರೆಹೊರೆಯ ಮನೆಗಳ ಆವರಣಕ್ಕೆ ಹೊಕ್ಕುತ್ತಿವೆ.


ಇಂದು ಮಧ್ಯಾಹ್ನ ಸದಾನಂದ ಗಟ್ಟಿ ಅವರ ಮನೆ ಆವರಣಕ್ಕೆ ಬೃಹತ್ ಸರ್ಪ ಹೊಕ್ಕಿದ್ದು ಗಟ್ಟಿ ಅವರು ಅದನ್ನ ಹಿಡಿದು ಗೋಣಿ ಚೀಲದಲ್ಲಿ ಹಾಕಿದ್ದಾರೆ. ಈ ನಡುವೆ ಸರ್ಪವು ಗಟ್ಟಿ ಅವರ ಬೆರಳಿಗೆ ಕಡಿದಿದ್ದು ಕೂಡಲೇ ಅವರನ್ನ ಮಂಗಳೂರಿನ ಪಾಧರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಭಾರತೀಯ ಸೇನೆಯಲ್ಲಿ ಪಳಗಿದ್ದ ಸದಾನಂದ ಗಟ್ಟಿ ಅವರು ಈ ಮೊದಲೂ ಅನೇಕ ವಿಷಕಾರಿ ಸರ್ಪಗಳನ್ನ ಹಿಡಿದು ಕಾಡಿಗೆ ಬಿಟ್ಟಿದ್ದರು. ಆದರೆ ಇಂದು ಸರ್ಪವನ್ನು ಹಿಡಿಯಲು ಹೋದ ಗಟ್ಟಿ ಅವರಿಗೆ ಸರ್ಪ ಕಡಿದಿದೆ.


ಹಳೆಯ ಪೊದೆಗಳನ್ನ ಕಡಿದು ಸಮತಟ್ಟುಗೊಳಿಸಿದ ಕಾರಣ ಈಗಾಗಲೇ ಪರಿಸರದಲ್ಲಿ ನಾಲ್ಕೈದು ಸರ್ಪಗಳು ದಿಕ್ಕಿಲ್ಲದೆ ಹರಿದಾಡುತ್ತಿದ್ದು ಇನ್ನಷ್ಟು ಸರ್ಪಗಳು ಬರುವ ಸಾಧ್ಯತೆಗಳಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಇಂದು ಮಧ್ಯಾಹ್ನ ಮಾಜಿ ಯೋಧ ಸದಾನಂದ ಗಟ್ಟಿ ಅವರಿಗೆ ಹಾವು ಕಡಿದ ನಂತರ ಅದೇ ಪರಿಸರದ ಮನೆಗಳ ಆವರಣಗಳಲ್ಲಿ ನಾಲ್ಕು ಸರ್ಪಗಳು ಕಾಣ ಸಿಕ್ಕಿವೆ.
Mangalore poisonous Snake bites man while catching in Pillar. Someshwar Resident X Military Man Sadanada Shetty was the man who was bitten by snake. He has been admitted to Fr Mullers Hospital in the city.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm