ಬ್ರೇಕಿಂಗ್ ನ್ಯೂಸ್
16-09-20 04:05 pm Mangalore Reporter ಕರಾವಳಿ
ಮಂಗಳೂರು, ಸಪ್ಟೆಂಬರ್ 16: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಆದರೆ ಇಡೀ ಕಚೇರಿ ಗೋವಾದ ಕಚೇರಿ ಜತೆಯಲ್ಲಿ ವಿಲೀನವಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಅತ್ತಾವರದ ಆದಾಯ ತೆರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ದೊಡ್ಡ ಮಟ್ಟಿನ ಆದಾಯ ಬರುತ್ತಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಆದಾಯ ಕೊಡುವ ಕೇಂದ್ರವಾಗಿದೆ. ಹಾಗಾಗಿ ಇದನ್ನು ಅರಿತುಕೊಂಡು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ. ನಾನೂ ಕೂಡಾ ಈ ಬಗ್ಗೆ ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಜತೆ ಮಾತನಾಡಿ ಪ್ರಧಾನ ಆಯುಕ್ತರ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಆದಾಯ ತೆರಿಗೆ ಕಚೇರಿಯೇ ಇಲ್ಲಿಂದ ಗೋವಾಕ್ಕೆ ಹೋಗಲಿದೆ ಎಂಬ ಅರ್ಥದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಯ ರಾಜಕೀಯ ಲಾಭವನ್ನು ಎತ್ತಿಕೊಳ್ಳುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಇಲ್ಲಿನ ತೆರಿಗೆದಾರರು ಮುಂದಿನ ದಿನಗಳಲ್ಲಿ ಗೋವಾಕ್ಕೆ ಅಲೆದಾಡಬೇಕಾಗುತ್ತದೆ ಎಂದೆಲ್ಲ ಸುಳ್ಳು ಸುದ್ದಿಗಳನ್ನು ಕಾಂಗ್ರೆಸ್ ಹಬ್ಬಿಸುತ್ತಿದೆ. ಕಚೇರಿ ಸ್ಥಳಾಂತರ ಆಗುತ್ತದೆ ಎಂದು ಹೇಳಿಕೆ ನೀಡಿ ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನು ಮಾಡಬಾರದು ಎಂದು ಶಾಸಕ ಕಾಮತ್ ಕಾಂಗ್ರೆಸ್ಗೆ ಕಿವಿಮಾತು ಹೇಳಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am