ಬ್ರೇಕಿಂಗ್ ನ್ಯೂಸ್
16-09-20 04:05 pm Mangalore Reporter ಕರಾವಳಿ
ಮಂಗಳೂರು, ಸಪ್ಟೆಂಬರ್ 16: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಆದರೆ ಇಡೀ ಕಚೇರಿ ಗೋವಾದ ಕಚೇರಿ ಜತೆಯಲ್ಲಿ ವಿಲೀನವಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಅತ್ತಾವರದ ಆದಾಯ ತೆರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ದೊಡ್ಡ ಮಟ್ಟಿನ ಆದಾಯ ಬರುತ್ತಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಆದಾಯ ಕೊಡುವ ಕೇಂದ್ರವಾಗಿದೆ. ಹಾಗಾಗಿ ಇದನ್ನು ಅರಿತುಕೊಂಡು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ. ನಾನೂ ಕೂಡಾ ಈ ಬಗ್ಗೆ ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಜತೆ ಮಾತನಾಡಿ ಪ್ರಧಾನ ಆಯುಕ್ತರ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಆದಾಯ ತೆರಿಗೆ ಕಚೇರಿಯೇ ಇಲ್ಲಿಂದ ಗೋವಾಕ್ಕೆ ಹೋಗಲಿದೆ ಎಂಬ ಅರ್ಥದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಯ ರಾಜಕೀಯ ಲಾಭವನ್ನು ಎತ್ತಿಕೊಳ್ಳುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಇಲ್ಲಿನ ತೆರಿಗೆದಾರರು ಮುಂದಿನ ದಿನಗಳಲ್ಲಿ ಗೋವಾಕ್ಕೆ ಅಲೆದಾಡಬೇಕಾಗುತ್ತದೆ ಎಂದೆಲ್ಲ ಸುಳ್ಳು ಸುದ್ದಿಗಳನ್ನು ಕಾಂಗ್ರೆಸ್ ಹಬ್ಬಿಸುತ್ತಿದೆ. ಕಚೇರಿ ಸ್ಥಳಾಂತರ ಆಗುತ್ತದೆ ಎಂದು ಹೇಳಿಕೆ ನೀಡಿ ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನು ಮಾಡಬಾರದು ಎಂದು ಶಾಸಕ ಕಾಮತ್ ಕಾಂಗ್ರೆಸ್ಗೆ ಕಿವಿಮಾತು ಹೇಳಿದರು.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am