ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.
ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.
ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm