ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm