ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm