ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm