ಬ್ರೇಕಿಂಗ್ ನ್ಯೂಸ್
16-09-20 09:48 pm Mangalore Reporter ಕರಾವಳಿ
ಮಂಗಳೂರು, ಸೆ.16: ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳಬೇಕು. ಎರಡು ವಾರದಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ, ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕೋವಿಡ್ 19, ಆಯುಷ್ಮಾನ್ ಭಾರತ್ ಕಾರ್ಡ್ ಕುರಿತಂತೆ ಮಂಗಳೂರು ಪುರಭವನದಲ್ಲಿ ಬುಧವಾರ ನಡೆದ ವಿಶೇಷ ಜನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲೆಯಲ್ಲಿ ಒಟ್ಟು 95 ಖಾಸಗಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ, 32 ಆಸ್ಪತ್ರೆಗಳು ಕೊರೊನಾ ಹೊರತುಪಡಿಸಿ ಇತರೇ ರೋಗಗಳಿಗೆ ಅನ್ವಯವಾಗುವಂತೆ ಆಯುಷ್ಮಾನ್ ಯೋಜನೆ ನೋಂದಣಿ ಮಾಡಿದೆ. ಆದರೆ, ಕೊರೋನಾ ಚಿಕಿತ್ಸೆಗಾಗಿ 8 ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಇಟ್ಟು 12 ಆಸ್ಪತ್ರೆಗಳು ಮಾತ್ರ ನೋಂದಣಿ ಮಾಡಿರುವುದು. ಉಳಿದ 12 ಆಸ್ಪತ್ರೆಗಳು ನೋಂದಣಿ ಪ್ರಕ್ರಿಯೆ ಹಂತದಲ್ಲಿದೆ. ಆದರೆ, ಮುಂದಿನ ಎರಡು ವಾರದ ಗಡುವು ನೀಡುತ್ತಿದ್ದು ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಕೊರೋನ ಚಿಕಿತ್ಸೆಯ ಕಾರಣಕ್ಕಾಗಿ ಆಯುಷ್ಮಾನ್ ನೋಂದಣಿ ಕಡ್ಡಾಯವಾಗಿ ಮಾಡಬೇಕು. ಕೊರೊನಾಗೆ ಚಿಕಿತ್ಸೆ ನೀಡುವ ಆಸ್ಪತ್ರೆಯವರು ದುಬಾರಿ ಮೊತ್ತ ಪಡೆಯುತ್ತಿರುವ ಆರೋಪವಿದೆ. ಇದು ನಿಜವಾಗಿದ್ದರೆ ತನಿಖೆ ನಡೆಸಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ನಲ್ಲಿ ಇದ್ದರೆ ಮಾತ್ರ ಆಯುಷ್ಮಾನ್ ಪ್ರಯೋಜನ ಸಿಗಲಿದೆ. ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೂ, ರೇಶನ್ ಕಾರ್ಡ್, ಆಧಾರ್ ಇದ್ದರೂ ಸೌಲಭ್ಯ ಸಿಗುತ್ತದೆ. ಆದರೆ, ಆಸ್ಪತ್ರೆಗೆ ಬಂದ 24 ಗಂಟೆಯಲ್ಲಿ ರೋಗಿ ಮೃತಪಟ್ಟರೆ ಆಯುಷ್ಮಾನ್ ಸೌಲಭ್ಯ ಸಿಗಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿ.ಪಂ., ಸಿಇಓ ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ ಎಸ್., ಡಿಸಿಪಿ ಅರುಣ್, ಮನಪಾ ಉಪ ಆಯುಕ್ತ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm