ಬ್ರೇಕಿಂಗ್ ನ್ಯೂಸ್
17-01-22 11:12 pm Mangalore Pillar Woman found dead in well, Family involvement suspected of Murder ಕರಾವಳಿ
ಉಳ್ಳಾಲ, ಜ.17: ಸೋಮೇಶ್ವರ ಗ್ರಾಮದ ಪಿಲಾರು ಶಾಲೆಯ ಬಳಿ 85 ರ ವೃದ್ಧೆಯೋರ್ವರು ಬಾವಿಗೆ ಬಿದ್ದು ಇಂದು ಮಧ್ಯಾಹ್ನ ಅಸಹಜ ಸಾವನ್ನಪ್ಪಿದ್ದು , ಕುಟುಂಬಸ್ಥರು ಮರಣೋತ್ತರ ಪರೀಕ್ಷಾ ವರದಿ ಬರುವ ಮೊದಲೇ ಆಕಸ್ಮಿಕ ಸಾವೆಂದು ಬಿಂಬಿಸಲು ಹೊರಟಿದ್ದಾರೆ.
ಪಿಲಾರು ಸರಕಾರಿ ಶಾಲಾ ಬಳಿಯ ದಿ.ಮಂಜಪ್ಪ ಮೂಲ್ಯ ಅವರ ಪತ್ನಿ ಕಲ್ಯಾಣಿ(85) ಬಾವಿಗೆ ಬಿದ್ದು ಮೃತಪಟ್ಟ ವೃದ್ಧೆ. ಪತಿ ಮಂಜಪ್ಪ ಅವರು 23 ವರ್ಷಗಳ ಹಿಂದೆ ಮೃತಪಟ್ಟಿದ್ದು ಕಲ್ಯಾಣಿ ಅವರು ತನ್ನ ಹಿರಿಯ ಮಗ ಉಮೇಶ್ ಅವರೊಂದಿಗೆ ಪಿಲಾರಿನ ಮನೆಯಲ್ಲಿ ವಾಸವಿದ್ದರು.


ಒಂದು ತಿಂಗಳ ಹಿಂದೆ ಕಲ್ಯಾಣಿ ಅವರು ತನ್ನ ಎರಡನೇ ಮಗ ಶಿಫಾಲಿ ಟ್ರಾವೆಲ್ಸ್ ಬಸ್ಸು ಮಾಲಕ ರಾಮಚಂದ್ರ ಅವರ ಮಂಗಳೂರಿನ ಮನೆಗೆ ನೆಲೆಸಲು ತೆರಳಿದ್ದರು. ಇಂದು ಮಧ್ಯಾಹ್ನ ಅಚಾನಕ್ಕಾಗಿ ರಾಮಚಂದ್ರ ಅವರು ತಾಯಿ ಕಲ್ಯಾಣಿ ಅವರನ್ನ ಪಿಲಾರಿನ ಮನೆಗೆ ತಂದು ಬಿಟ್ಟಿದ್ದರು. ಆನಂತರ ಕೆಲ ಹೊತ್ತಿನಲ್ಲಿ ಘಟನೆ ನಡೆದಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬಾವಿಯಲ್ಲಿದ್ದ ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕಲ್ಯಾಣಿ ಅವರು ಬಾವಿಗೆ ಹೇಗೆ ಬಿದ್ದರೆಂದು ನೋಡಿದ ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲ. ಅವರು ಬಿದ್ದು ಮೃತಪಟ್ಟ ಬಾವಿ ಆವರಣವೂ ಆಯತಪ್ಪಿ ಬೀಳದಷ್ಟು ರಕ್ಷಣಾತ್ಮಕ ಸ್ಥಿತಿಯಲ್ಲಿದೆ. ಮೃತರ ಮರಣೋತ್ತರ ಪರೀಕ್ಷೆ ವರದಿ ಬರುವ ಮೊದಲೇ ಕುಟುಂಬಸ್ಥರು ಕಲ್ಯಾಣಿ ಅವರು ನರರೋಗದಿಂದ ಬಳಲುತ್ತಿದ್ದು ದೇಹ ವಾಲಿ ಬಾವಿಗೆ ಬಿದ್ದು ಸತ್ತಿರುವುದಾಗಿ ಬಿಂಬಿಸಲು ಹೊರಟಿದ್ದಾರೆ. ದೇಹವಾಲಿ ಬಾವಿಗೆ ಬಿದ್ದಿದ್ದರೆ ಅವರ ದೇಹ ಛಿದ್ರವಾಗುವ ಸಾಧ್ಯತೆ ಇರುತ್ತಿತ್ತು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.
Mangalore Pillar old Woman found dead in well, Family involvement suspected of Murder
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm