ಬ್ರೇಕಿಂಗ್ ನ್ಯೂಸ್
20-01-22 12:23 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.20 : ಹಿರಿಯಡ್ಕ ಯಕ್ಷಾಗನ ಮೇಳದ ಪ್ರಧಾನ ಪಾತ್ರಧಾರಿ, ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಕಲಾವಿದ ವೇಣೂರು ವಾಮನ ಕುಮಾರ್ (47) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬುಧವಾರ ರಾತ್ರಿ ಕುಂದಾಪುರದ ಕೊಂಕಿ ಎಂಬಲ್ಲಿ ಹಿರಿಯಡ್ಕ ಮೇಳದ ಯಕ್ಷಗಾನ ಮುಗಿಸಿ, ಬೆಳಗ್ಗೆ 6 ಗಂಟೆ ಸುಮಾರಿಗೆ ಬೈಕಿನಲ್ಲಿ ವೇಣೂರಿನ ಮನೆಗೆ ಹಿಂತಿರುಗುತ್ತಿದ್ದರು. ಮೂಡುಬಿದ್ರೆ ಬಳಿಯ ಗಂಟಾಲ್ಕಟ್ಟೆ ರಸ್ತೆ ತಿರುವಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಓಮ್ನಿ ವ್ಯಾನ್ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ವಾಮನ ಕುಮಾರ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಅವರು ಪತ್ನಿ, ಓರ್ವ ಪುತ್ರಿ. ಪುತ್ರ ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ.
ತುಳು, ಕನ್ನಡ ಯಕ್ಷಗಾನಗಳಲ್ಲಿ ಹೆಸರು ಮಾಡಿದ್ದ ವಾಮನ ಕುಮಾರ್, ಸ್ತ್ರೀವೇಷ ಹಾಗೂ ಪುಂಡು ವೇಷಗಳಿಗೆ ಜೀವ ತುಂಬಿದ್ದ ಕಲಾವಿದ. ಸುದೀರ್ಘ 30 ವರ್ಷಗಳಿಂದ ಯಕ್ಷಗಾನ ಕಲಾ ಸೇವೆ ಮಾಡಿರುವ ಅವರು, ಕಳೆದ ಎಂಟು ವರ್ಷಗಳಿಂದ ಹಿರಿಯಡ್ಕ ಮೇಳದಲ್ಲಿ ಪ್ರಧಾನ ಪಾತ್ರಧಾರಿಯಾಗಿದ್ದರು. ಜೊತೆಗೆ ಮೇಳದ ಮ್ಯಾನೇಜರ್ ಆಗಿಯೂ ಕೆಲಸ ನಿರ್ವಹಿಸಿದ್ದರು.

ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಓರಗೆಯ ಸಹಪಾಠಿಗಳ ಜೊತೆ ಯಕ್ಷಗಾನ ಕಲಿತಿದ್ದ ವಾಮನ ಕುಮಾರ್, ಮೊದಲಿಗೆ ಧರ್ಮಸ್ಥಳ ಮೇಳ ಸೇರಿದ್ದರು. ಎರಡು ವರ್ಷ ಅಲ್ಲಿ ತಿರುಗಾಟ ನಡೆಸಿದ ಬಳಿಕ ಕದ್ರಿ, ಮಂಗಳಾದೇವಿ ಮೇಳಗಳ ಉತ್ತುಂಗದ ಕಾಲದಲ್ಲಿ ಅದರ ಜೊತೆ ಸೇರಿದ್ದರು. ಡಿ.ಮನೋಹರ ಕುಮಾರ್ ಜೊತೆ ಗೆಜ್ಜೆಪೂಜೆ, ಇನ್ನಿತರ ತುಳು ಯಕ್ಷಗಾನಗಳಲ್ಲಿ ಪುಂಡು ವೇಷಗಳ ಪಾತ್ರ ಮಾಡಿ ಜನ ಮೆಚ್ಚುಗೆ ಪಡೆದಿದ್ದರು. ಆನಂತರ ಪುತ್ತೂರು ಶ್ರೀಧರ ಭಂಡಾರಿಯವರ ಹವ್ಯಾಸಿ ಮೇಳದಲ್ಲಿ ಹತ್ತು ವರ್ಷ ತಿರುಗಾಟ ನಡೆಸಿ, ಪುರಾಣ ಪಾತ್ರಗಳಲ್ಲಿ ಮಿಂಚಿದ್ದರು. ಕೃಷ್ಣ, ವಿಷ್ಣುವಿನ ಪಾತ್ರಗಳಿಗೆ ಹೇಳಿ ಮಾಡಿಸಿದ ಬಣ್ಣಗಾರಿಕೆ, ವಾಕ್ಪಟುತ್ವ ಅವರಲ್ಲಿತ್ತು. ಬಹುತೇಕ ಎಲ್ಲ ರೀತಿಯ ಪಾತ್ರಗಳನ್ನೂ ನಿರ್ವಹಿಸುತ್ತಿದ್ದ ವಾಮನಕುಮಾರ್ ಯಕ್ಷಗಾನದ ಮಟ್ಟಿಗೆ ಸವ್ಯಸಾಚಿ ಎನ್ನುವ ರೀತಿಯ ಕಲಾವಿದರಾಗಿದ್ದರು.
In a tragic road accident which happened on Thursday January 20 morning at Gantalkatte within the municipal limits here, accomplished Yakshagana artiste lost his life. The deceased is identified as Vaman Kumar (47), a Yakshagana artiste living near Venoor.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 09:29 pm
Mangalore Correspondent
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm