ಬ್ರೇಕಿಂಗ್ ನ್ಯೂಸ್
21-01-22 11:51 am Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.21 : ಕೆಲವು ದಿವಸಗಳಿಂದ ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಭಾರೀ ಗಾತ್ರದ ನಾಗರ ಹಾವುಗಳು ಜನನಿಬಿಡ ಪ್ರದೇಶಗಳಲ್ಲದೆ ಪಿಲಾರು ಶಾಲಾ ಆವರಣದೊಳಗೂ ಸೇರಿದ್ದು ಶಾಲೆಯ ಬಳಿಯಲ್ಲಿದ್ದ ಬೃಹತ್ ನಾಗರಹಾವನ್ನು ಸ್ನೇಕ್ ರಂಜಿತ್ ಅವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಪಿಲಾರು ಮಹಾಲಕ್ಷ್ಮೀ ಮಂದಿರದ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಅತ್ಯಂತ ಹಳೆಯ ಪೊದೆ ಮತ್ತು ಗುಡ್ಡ ಪ್ರದೇಶವನ್ನ ಜೆಸಿಬಿ ಯಂತ್ರದಿಂದ ಸಮತಟ್ಟುಗೊಳಿಸಲಾಗಿತ್ತು. ನಂತರ ಈ ಪ್ರದೇಶದಲ್ಲಿ ನಿತ್ಯವೂ ಬೃಹದಾಕಾರದ ಸರ್ಪಗಳು ದಿಕ್ಕಿಲ್ಲದೆ ಓಡಾಡುತ್ತಿವೆ. ಕಳೆದ ವಾರ ಪಿಲಾರಿನ ಮಾಜಿ ಯೋಧ ಸದಾನಂದ ಗಟ್ಟಿ(ಬಾಬು ಗಟ್ಟಿ) ಅವರ ಮನೆಗೂ ಬೃಹತ್ ಸರ್ಪ ನುಗ್ಗಿತ್ತು. ಗಟ್ಟಿ ಅವರು ಸರ್ಪವನ್ನ ಹಿಡಿದು ಗೋಣಿ ಚೀಲದಲ್ಲಿ ತುಂಬುತ್ತಿದ್ದಾಗ ಸರ್ಪವು ಗಟ್ಟಿಯವರ ಕೈ ಬೆರಳಿಗೆ ಕಚ್ಚಿ ಗಾಯಗೊಳಿಸಿತ್ತು. ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದರು.

ಬುಧವಾರ ಸಂಜೆ ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗಡೆ ಬೃಹದಾಕಾರದ ಎರಡು ಸರ್ಪಗಳು ಸುತ್ತಾಡುತ್ತಿರುವುದನ್ನ ಸ್ಥಳೀಯರು ನೋಡಿದ್ದು ವೀಡಿಯೋ ಮಾಡಿ ಜನರು ಜಾಗರೂಕರಾಗಿರಬೇಕೆಂದು ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. ಮರುದಿನ ಬೆಳಗ್ಗೆ ಶಾಲಾ ಆವರಣದೊಳಗೆ ಮತ್ತೆ ಬೃಹತ್ ಸರ್ಪವು ಹರಿದಾಡುವುದು ಕಂಡುಬಂದಿದೆ. \

ಸಂಜೆ ವೇಳೆ ಶಾಲಾ ಗೇಟಿನ ಎದುರುಗಡೆ ಬೃಹತ್ ಸರ್ಪ ಠಳಾಯಿಸುತ್ತಿದ್ದುದನ್ನ ಕಂಡ ಸ್ಥಳೀಯರು ತೊಕ್ಕೊಟ್ಟಿನ ರಿಕ್ಷಾ ಚಾಲಕ ಸ್ನೇಕ್ ರಂಜಿತ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ರಂಜಿತ್ ಅವರು ಬೃಹತ್ ಗಾತ್ರದ ನಾಗರವನ್ನ ಬೆನ್ನಟ್ಟಿ ಕಾರ್ಯಾಚರಣೆ ಶುರು ಮಾಡಿದ್ದಾರೆ. ಈ ವೇಳೆ ನಾಗರ ಹಾವು ಶಾಲೆಯ ಮುಂಭಾಗದ ಮನೆಯ ಆವರಣದೊಳಗೆ ನುಗ್ಗಿದ್ದು ರಂಜಿತ್ ಅವರು ಚಾಣಾಕ್ಷತನದಿಂದ ಅದನ್ನ ಹಿಡಿದು ಹಿಂದು ನಂಬಿಕೆ ಪ್ರಕಾರ ಅರಶಿಣ ಮಿಶ್ರಿತ ನೀರು ಚಿಮುಕಿಸಿ ಗೋಣಿ ಚೀಲದೊಳಗೆ ತುಂಬಿ ದೂರದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ.
Mangalore Huge venomous snakes spotted near school in Pillar.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm