ಬ್ರೇಕಿಂಗ್ ನ್ಯೂಸ್
23-01-22 11:13 am Mangalore Correspondent ಕರಾವಳಿ
ಉಳ್ಳಾಲ, ಜ.23 : ಹೆದ್ದಾರಿಯಲ್ಲಿ ಸೂಚನೆ ನೀಡದೆ ಅಚಾನಕ್ಕಾಗಿ ತಿರುವು ಪಡೆದ ಕಾರು ಚಾಲಕನ ಪ್ರಾಣ ಉಳಿಸಲು ಹೋದ ಭಾರೀ ಗಾತ್ರದ ಟ್ರಕ್ ಕಮರಿಗೆ ಉರುಳಿ ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದೆ.
ಪುಣೆಯಿಂದ ಕೇರಳದ ಕಾಸರಗೋಡಿಗೆ ಟಾಟಾ ಹುಂಡೈ ಕಾರುಗಳನ್ನ ಹೊತ್ತೊಯ್ಯುತ್ತಿದ್ದ ಭಾರೀ ಗಾತ್ರದ ಟ್ರಕ್ ಕಾಪಿಕಾಡು ಎರಡನೇ ಅಡ್ಡ ರಸ್ತೆಯ ರಾಜ್ ಕೇಟರರ್ಸ್ ಬಳಿಯ ಕಮರಿಗೆ ಉರುಳಿದೆ. ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ತೊಕ್ಕೊಟ್ಟಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಟ್ರಕ್ ಮುಂದುಗಡೆಯಿಂದ ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ಆಲ್ಫ್ರೆಡ್ ಗಾಡ್ ಫ್ರೀ ಡಿಸೋಜ ಎಂಬವರು ಬ್ರೀಝ ಕಾರು ಚಲಾಯಿಸುತ್ತಿದ್ದರು. ಕಾಪಿಕಾಡು ಎರಡನೇ ಅಡ್ಡ ರಸ್ತೆ ಬರುತ್ತಿದ್ದಂತೆ ಆಲ್ಪ್ರೆಡ್ ಅವರು ಯಾವುದೇ ಸೂಚನೆ ನೀಡದೆ ಅಚಾನಕ್ಕಾಗಿ ಕಾರನ್ನ ತಿರುಗಿಸಿದ್ದಾರೆ. ಇದರಿಂದ ವಿಚಲಿತನಾದ ಹಿಂಬದಿ ಇದ್ದ ಟ್ರಕ್ ಚಾಲಕ ಬಿಹಾರ ಮೂಲದ ರಮೇಶ್ ಕಾರನ್ನ ರಕ್ಷಿಸಲು ಹೋಗಿ ಟ್ರಕ್ಕನ್ನೇ ಕಮರಿಗೆ ಹಾಕಿದ್ದಾನೆ.






ತನ್ನ ಪ್ರಾಣ ರಕ್ಷಿಸಿದ ಪರಿಣಿತ ಚಾಲಕ ರಮೇಶನನ್ನು ಕಾರು ಚಾಲಕ ಆಲ್ಫ್ರೆಡ್ ಏಕ ವಚನದಲ್ಲಿ ನಿಂದಿಸಿ ತನ್ನದೇನೂ ತಪ್ಪಿಲ್ಲವೆಂದು ಬಿಂಬಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರಿಗೂ ಕಾನೂನಿನ ಪಾಠ ಹೇಳಿ ಕೊಡಲು ಮುಂದಾಗಿದ್ದಾರೆ. ಅಷ್ಟರಲ್ಲೇ ಅಪಘಾತವಾದ ದೃಶ್ಯವು ಪಕ್ಕದ ಸಿಮೆಂಟ್ ಅಂಗಡಿಯ ಸಿಸಿ ಟಿವಿ ಫೂಟೇಜಲ್ಲಿ ಲಭಿಸಿದ್ದು ಇದನ್ನ ಕಂಡ ನಂತರ ಆಲ್ಪ್ರೆಡ್ ಗೆ ಜ್ನಾನೋದಯವಾಗಿದೆ. ಟ್ರಕ್ ಕಮರಿಗೆ ಉರುಳಿದ ಸಂದರ್ಭ ರಸ್ತೆ ಬದಿಯಲ್ಲಿ ಇಬ್ಬರು ಪಾದಚಾರಿಗಳು ನಿಂತಿದ್ದು ಕೂದಲೆಲೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Major trailer truck - car accident averted near Thokottu. The huge truck goes off road in order to save the car driver who took a sudden turn without any indication.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm