ಬ್ರೇಕಿಂಗ್ ನ್ಯೂಸ್
23-01-22 11:13 am Mangalore Correspondent ಕರಾವಳಿ
ಉಳ್ಳಾಲ, ಜ.23 : ಹೆದ್ದಾರಿಯಲ್ಲಿ ಸೂಚನೆ ನೀಡದೆ ಅಚಾನಕ್ಕಾಗಿ ತಿರುವು ಪಡೆದ ಕಾರು ಚಾಲಕನ ಪ್ರಾಣ ಉಳಿಸಲು ಹೋದ ಭಾರೀ ಗಾತ್ರದ ಟ್ರಕ್ ಕಮರಿಗೆ ಉರುಳಿ ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದೆ.
ಪುಣೆಯಿಂದ ಕೇರಳದ ಕಾಸರಗೋಡಿಗೆ ಟಾಟಾ ಹುಂಡೈ ಕಾರುಗಳನ್ನ ಹೊತ್ತೊಯ್ಯುತ್ತಿದ್ದ ಭಾರೀ ಗಾತ್ರದ ಟ್ರಕ್ ಕಾಪಿಕಾಡು ಎರಡನೇ ಅಡ್ಡ ರಸ್ತೆಯ ರಾಜ್ ಕೇಟರರ್ಸ್ ಬಳಿಯ ಕಮರಿಗೆ ಉರುಳಿದೆ. ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ತೊಕ್ಕೊಟ್ಟಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಟ್ರಕ್ ಮುಂದುಗಡೆಯಿಂದ ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ಆಲ್ಫ್ರೆಡ್ ಗಾಡ್ ಫ್ರೀ ಡಿಸೋಜ ಎಂಬವರು ಬ್ರೀಝ ಕಾರು ಚಲಾಯಿಸುತ್ತಿದ್ದರು. ಕಾಪಿಕಾಡು ಎರಡನೇ ಅಡ್ಡ ರಸ್ತೆ ಬರುತ್ತಿದ್ದಂತೆ ಆಲ್ಪ್ರೆಡ್ ಅವರು ಯಾವುದೇ ಸೂಚನೆ ನೀಡದೆ ಅಚಾನಕ್ಕಾಗಿ ಕಾರನ್ನ ತಿರುಗಿಸಿದ್ದಾರೆ. ಇದರಿಂದ ವಿಚಲಿತನಾದ ಹಿಂಬದಿ ಇದ್ದ ಟ್ರಕ್ ಚಾಲಕ ಬಿಹಾರ ಮೂಲದ ರಮೇಶ್ ಕಾರನ್ನ ರಕ್ಷಿಸಲು ಹೋಗಿ ಟ್ರಕ್ಕನ್ನೇ ಕಮರಿಗೆ ಹಾಕಿದ್ದಾನೆ.






ತನ್ನ ಪ್ರಾಣ ರಕ್ಷಿಸಿದ ಪರಿಣಿತ ಚಾಲಕ ರಮೇಶನನ್ನು ಕಾರು ಚಾಲಕ ಆಲ್ಫ್ರೆಡ್ ಏಕ ವಚನದಲ್ಲಿ ನಿಂದಿಸಿ ತನ್ನದೇನೂ ತಪ್ಪಿಲ್ಲವೆಂದು ಬಿಂಬಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರಿಗೂ ಕಾನೂನಿನ ಪಾಠ ಹೇಳಿ ಕೊಡಲು ಮುಂದಾಗಿದ್ದಾರೆ. ಅಷ್ಟರಲ್ಲೇ ಅಪಘಾತವಾದ ದೃಶ್ಯವು ಪಕ್ಕದ ಸಿಮೆಂಟ್ ಅಂಗಡಿಯ ಸಿಸಿ ಟಿವಿ ಫೂಟೇಜಲ್ಲಿ ಲಭಿಸಿದ್ದು ಇದನ್ನ ಕಂಡ ನಂತರ ಆಲ್ಪ್ರೆಡ್ ಗೆ ಜ್ನಾನೋದಯವಾಗಿದೆ. ಟ್ರಕ್ ಕಮರಿಗೆ ಉರುಳಿದ ಸಂದರ್ಭ ರಸ್ತೆ ಬದಿಯಲ್ಲಿ ಇಬ್ಬರು ಪಾದಚಾರಿಗಳು ನಿಂತಿದ್ದು ಕೂದಲೆಲೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Major trailer truck - car accident averted near Thokottu. The huge truck goes off road in order to save the car driver who took a sudden turn without any indication.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm