ಬ್ರೇಕಿಂಗ್ ನ್ಯೂಸ್
23-01-22 08:27 pm Mangalore Correspondent ಕರಾವಳಿ
ಮಂಗಳೂರು, ಜ.23 ಕಮ್ಯುನಿಸ್ಟರ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ದೆಹಲಿಯಲ್ಲಿ ಅವಕಾಶ ಸಿಗದಿರುವುದಕ್ಕೆ ಎಲ್ಲ ಹಿಂದೂಗಳ ಮನಸಿಗೆ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರಾದ ಜನಾರ್ದನ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಯನ್ನ ಜನವರಿ 26 ರಂದು ಆಯೋಜಿಸಿದ್ದು ಜಾತಿ ಭೇದ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ, ಅವರ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಅಲ್ಲದೆ, ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ವಿಶ್ವ ಹಿಂದು ಪರಿಷತ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ, ದೇಶ ಕಂಡ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣ ಗುರುಗಳು, ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೋಸ್ಕರ, ಸಮಾಜದಲ್ಲಿನ ಮೇಲ್ಜಾತಿ ಕೀಳ್ಜಾತಿ ಭೇದ ಭಾವವನ್ನು ದೂರಮಾಡಲು ಹೋರಾಟ ಮಾಡಿದ ಮಹಾನ್ ಯೋಗಿ.

ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಪ್ರಾತಃ ಸ್ಮರಣೆಯಲ್ಲಿ ಶ್ರೀ ಗುರುಗಳನ್ನು ನಿತ್ಯ ಸ್ಮರಣೆ ಮಾಡುತ್ತೇವೆ. 2017 ರಲ್ಲಿ ನಡೆದ ಸಾವಿರಾರು ಸಾಧು ಸಂತರು ಸೇರಿ ಇತಿಹಾಸ ನಿರ್ಮಿಸಿದ ಉಡುಪಿಯ ಧರ್ಮಸಂಸದ್ ಕಾರ್ಯಕ್ರಮದ ವೇದಿಕೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಇಡಲಾಗಿತ್ತು. ಗಣರಾಜ್ಯ ದಿನದಂದು ನಡೆಯಲಿರುವ ಸ್ತಬ್ಧಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬೆಂಬಲ ಸೂಚಿಸುತ್ತದೆ. ಮತ್ತು ಸಂಘಟನೆಯ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸುತ್ತದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Narayana Guru Tableau themed on traditional handicrafts VHP to supports Janardhana Poojary procession.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm