ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm