ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm