ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm