ಬ್ರೇಕಿಂಗ್ ನ್ಯೂಸ್
30-01-22 05:44 pm Mangalore Correspondent ಕರಾವಳಿ
ಮಂಗಳೂರು, ಜ.30 : ಕರಾವಳಿ ಜಿಲ್ಲೆಗಳ ಏಕೈಕ ಅಲ್ಪಸಂಖ್ಯಾತ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರನ್ನು ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ವರ್ಗದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿನ್ನೆಲೆಯಲ್ಲಿ ಮತ್ತೊಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಮುಂಚೂಣಿ ಹುದ್ದೆಗೆ ನೇಮಕ ಮಾಡಲಾಗಿದೆ. ಮಂಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್, ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಮತ್ತು ಆಹಾರ ಸಚಿವರಾಗಿ ಗಮನ ಸೆಳೆದಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ನೇಮಿಸಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ ಸಭಾ ನಾಯಕನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದಕ್ಕೆ ಮುನಿಸಿಕೊಂಡು ಸಿ.ಎಂ.ಇಬ್ರಾಹಿಂ ಪಕ್ಷ ಬಿಡುತ್ತಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯ ನಂಬಿಕೊಂಡು ಪಕ್ಷಕ್ಕೆ ಬಂದೆ, ಈಗ ನನ್ನನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರೇ ಶಕ್ತಿ. ಅವರಿಲ್ಲದೆ ಪಕ್ಷ ಇಲ್ಲ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸಿದೆ ಅನ್ನುವ ಸಂದೇಶವನ್ನು ಸಿಎಂ ಇಬ್ರಾಹಿಂ ನೀಡಿದ್ದರು.
ಇಬ್ರಾಹಿಂ ಠಕ್ಕರ್ ಕೊಟ್ಟಿದ್ದಕ್ಕೆ ಮತ್ತೊಬ್ಬ ಪಕ್ಷ ನಿಷ್ಠ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಉನ್ನತ ಹುದ್ದೆಗೆ ಏರಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರೇ ಇದ್ದಾರೆ. ಈಗ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಉಪ ನಾಯಕನ ಸ್ಥಾನಕ್ಕೆ ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕಾಗಿ ಖಾದರ್ ಅವರಿಗೆ ಭಡ್ತಿ ನೀಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ. ಕರಾವಳಿ ಮೂಲದವರೇ ಆಗಿರುವ ಬಿಕೆ ಹರಿಪ್ರಸಾದ್ ಅವರನ್ನು ಇತ್ತೀಚೆಗೆ ವಿಧಾನ ಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿತ್ತು.
The Congress high command has appointed former minister and current MLA U T Khader as the deputy leader of Congress Legislative party in Karnataka Assembly. An order to this effect was sent by K C Venugopal, general secretary of the party.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm