ಬ್ರೇಕಿಂಗ್ ನ್ಯೂಸ್
31-01-22 07:14 pm HK Desk news ಕರಾವಳಿ
ಉಡುಪಿ, ಜ.31 : ಹಿಜಬ್ ವಿವಾದದ ಬಗ್ಗೆ ಶಾಸಕ ರಘುಪತಿ ನೇತೃತ್ವದಲ್ಲಿ ಕಾಲೇಜಿನಲ್ಲಿ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರ ಸಭೆ ನಡೆದಿದ್ದು ಹಿಜಾಬ್ ಬೇಕೆಂದು ಪಟ್ಟು ಹಿಡಿದವರಿಗೆ ಖಡಕ್ ವಾರ್ನಿಂಗ್ ಮಾಡಲಾಗಿದೆ.
ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಹಂತದಲ್ಲಿ ಹಿಜಾಬ್ ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲ ವಿಚಾರಗಳನ್ನು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ಇಲ್ಲದಿದ್ದರೆ ಬರುವುದು ಬೇಡ. ನಾಳೆಯಿಂದ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಸಭೆಯ ಬಳಿಕ ಶಾಸಕ ರಘುಪತಿ ಭಟ್ ಮಾಹಿತಿ ನೀಡಿದ್ದಾರೆ.
ಮಾಧ್ಯಮ, ಸಂಘ- ಸಂಸ್ಥೆ, ಯಾವುದೇ ಸಂಘಟನೆಗಳಿಗೆ ಕಾಲೇಜು ಆವರಣಕ್ಕೆ ಪ್ರವೇಶ ಇಲ್ಲ. ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳು, ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಜಿಲ್ಲಾಧಿಕಾರಿಗೆ ಕೊಡಿ. ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು. ಅದು ಬಿಟ್ಟು ಗೊಂದಲಕ್ಕೆ ಅವಕಾಶ ಇಲ್ಲ ಎಂದು ರಘುಪತಿ ಭಟ್ ಹೇಳಿದ್ದಾರೆ.
ಸಭೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು, ಅಧ್ಯಕ್ಷರು, ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಅಧಿಕಾರಿಗಳು ಭಾಗಿಯಾಗಿದ್ದರು. ಹಿಜಾಬ್ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರನ್ನು ಬ್ಯಾರಿ ಅಕಾಡೆಮಿ ಸದಸ್ಯರು ಮನವೊಲಿಸುವ ಯತ್ನ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಹಿಜಾಬ್ ಧಾರಣೆಗೆ ನಮ್ಮ ವಿರೋಧ ಇಲ್ಲ. ಅದು ಇಸ್ಲಾಂ ಧಾರ್ಮಿಕ ಪದ್ಧತಿ. ಆದರೆ ಶರಿಯತ್ ಆಧರಿತ ಕಾನೂನು ಬೇರೆ. ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಇಲ್ಲಿನ ಸರ್ಕಾರದ ಆದೇಶವನ್ನು ಪಾಲಿಸಬೇಕು. ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಬ್ ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ ಎಂದು ಹೇಳಿದರು.
MLA and president of College Development Authority Raghupati Bhat has categorically denied the girls protesting for Hijab, entry to the Government Women's PU College here. He annnounced the same after chairing a meeting at the college on Monday, January 31 in which four of the five girl students demanding Hijab in classes participated.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm