ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm