ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm