ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm