ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm