ಬ್ರೇಕಿಂಗ್ ನ್ಯೂಸ್
17-09-20 07:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ತಾನೊಂದು ಬಗೆದರೆ ವಿಧಿಯೊಂದು ಬಗೆಯುತ್ತೆ ಅಂತಾರೆ. ಆ ಮಹಿಳೆಯ ಬದುಕಲ್ಲೂ ಅದೇ ಆಗಿತ್ತು. ಆಕೆ ತನ್ನ ಗಂಡನ ಉಳಿವಿಗಾಗಿ ಗೋಗರೆದರು. ಸಹಾಯಕ್ಕಾಗಿ ಅಂಗಲಾಚಿದರು. ಮಹಿಳೆಯ ನೋವು ಕಂಡು ನೆರವಿನ ಕೈಗಳೂ ಸಹಾಯ ಹಸ್ತ ಚಾಚಿದವು. ಆದರೆ, ವಿಧಿಯಾಟ ಬೇರೆಯೇ ಆಗಿತ್ತು. ಸಾವಿರ ಹೃದಯಗಳು ಮಿಡಿದರೂ ಜೀವ ಉಳಿಯಲೇ ಇಲ್ಲ !
ಹೌದು.. ದಾನಿಗಳು ಮಿಡಿದರೂ ವಿಧಿ ಮಾತ್ರ ಮರುಗಲೇ ಇಲ್ಲ. ಆಕೆಯ ಹೆಸರು ಗೀತಾ.. ಎರಡು ದಿನಗಳ ಹಿಂದೆ ಆಕೆಯ ಗಂಡ ಬೋಳಾರದ ರಂಜೇಶ್ ಶೆಟ್ಟಿ ಕಿಡ್ನಿ ಕಾಯಿಲೆಯಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಐಸಿಯುನಲ್ಲಿ ದಾಖಲಿಸಲು ಆಕೆಯ ಬಳಿ ಹಣ ಇರಲಿಲ್ಲ. ತನ್ನಲ್ಲಿದ್ದ ಬಂಗಾರವನ್ನು ಮಾರಿ 50 ಸಾವಿರ ರೂಪಾಯಿ ಮಾಡಿ, ಐಸಿಯುಗೆ ದಾಖಲು ಮಾಡಿದ್ದರು. ಆಬಳಿಕ ಆಸ್ಪತ್ರೆ ಬಳಿಯ ಮೆಡಿಕಲ್ ಶಾಪ್ ಒಂದರಲ್ಲಿ ತನ್ನ ನೋವನ್ನು ಹೇಳಿಕೊಂಡರು. ಮೆಡಿಕಲ್ ಶಾಪ್ ಹುಡುಗ ಆಪದ್ಬಾಂಧವ ಆಸಿಫ್ ಅವರಿಗೆ ಸುದ್ದಿ ಮುಟ್ಟಿಸಿದ್ದರು. ನೇರವಾಗಿ ಆಸ್ಪತ್ರೆಗೆ ಧಾವಿಸಿ ಬಂದ ಆಸಿಫ್, ಒಂದು ವಿಡಿಯೋ ಮಾಡಿ ಅದರಲ್ಲಿ ಅಕೌಂಟ್ ನಂಬರ್ ದಾಖಲಿಸಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.


ಮಹಿಳೆ ಗೀತಾ ತುಳುವಿನಲ್ಲಿ ತನ್ನ ನೋವನ್ನು ಹೇಳಿಕೊಂಡಿದ್ದರು. ಬಂಗಾರ ಮಾರಿ 50 ಸಾವಿರ ತಂದಿದ್ದೇನೆ. ದಯವಿಟ್ಟು ನನ್ನ ಗಂಡನನ್ನು ಉಳಿಸಿ ಕೊಡಿ. ಸಣ್ಣ ಮಗು ಇದೆ ಎಂದು ಅಳು ತೋಡಿಕೊಂಡಿದ್ದರು. ಅಲ್ಲದೆ, ಆಸಿಫ್ ಕೂಡ ಧರ್ಮ ಭೇದ ನೋಡದೆ ಈ ತಾಯಿಯ ಮಾಂಗಲ್ಯ ಉಳಿಸಲು ನೆರವಾಗಿ ಎಂದು ಮನವಿ ಮಾಡಿದ್ದರು. ಸೆ.15ರ ರಾತ್ರಿ ಎಂಟು ಗಂಟೆಗೆ ಅಪ್ಲೋಡ್ ಆಗಿದ್ದ ಈ ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಭಾರೀ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ದೇಶ- ವಿದೇಶಗಳಿಂದ ನೆರವಿನ ಮಹಾಪೂರವೂ ಹರಿದು ಬಂದಿತ್ತು. ಕೇವಲ ಅರ್ಧ ದಿನದಲ್ಲಿ 14 ಲಕ್ಷ ರೂಪಾಯಿ ಸಂಗ್ರಹ ಆಗಿತ್ತು. ಕರುಣೆಗೆ ಮಿಡಿವ ಹೃದಯಗಳು ನಮ್ಮ ನಡುವೆ ಇವೆ ಎನ್ನುವುದನ್ನು ಸಹೃದಯರು ತೋರಿಸಿಕೊಟ್ಟಿದ್ದರು. ಮರುದಿನ ಮಧ್ಯಾಹ್ನ ಮತ್ತೊಂದು ವಿಡಿಯೋ ಮಾಡಿದ್ದ ಆಸಿಫ್, ಚಿಕಿತ್ಸೆಗೆ ಐದು ಲಕ್ಷ ಬೇಕಾಗಿತ್ತು. ಏಳು ಲಕ್ಷ ಬರಬಹುದು ಅಂದ್ಕೊಂಡಿದ್ದೆವು. ನಿರೀಕ್ಷೆಗೂ ಮೀರಿ ನೆರವು ನೀಡಿದ್ದೀರಿ. ನಿಮ್ಮ ನೆರವಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದರು.
ಆದರೆ, ಮಹಿಳೆಯ ನೋವಿಗೆ ಸಾವಿರ ಹೃದಯಗಳು ಮಿಡಿದರೂ ಆಕೆಯ ಗಂಡನನ್ನು ಮಾತ್ರ ಉಳಿಸಿಕೊಳ್ಳಲು ಆಗಲಿಲ್ಲ. ಮೊದಲೇ ಹೃದಯ ರೋಗಿಯಾಗಿದ್ದ ರಂಜೇಲ್ ಶೆಟ್ಟಿಗೆ ಹಿಂದೊಮ್ಮೆ ಸರ್ಜರಿ ಆಗಿತ್ತು. ಈಗ ಕಿಡ್ನಿ ವೈಫಲ್ಯ ಆಗಿದ್ದಲ್ಲದೆ, ಕೊರೊನಾ ರೋಗ ಬಾಧಿತರಾಗಿ ಒಂದೇ ದಿನದಲ್ಲಿ ಮೃತಪಟ್ಟಿದ್ದಾರೆ. ಸಾವಿರ ಹೃದಯಗಳು ಸೇರಿ ಬಡಿದಾಡಿದರೂ ವಿಧಿಯಾಟ ಬದಲಿಸಲಿಲ್ಲ. ಆದರೆ, ಮಾನವೀಯತೆಗೆ ಜನ ಸ್ಪಂದಿಸುತ್ತಾರೆ ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am