ಬ್ರೇಕಿಂಗ್ ನ್ಯೂಸ್
04-02-22 05:34 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.4 : ಸೆಕ್ಯುಲರ್ ಸೋಗಲ್ಲಿ ಗೋವಿನ ಬದಲು ಹುಲಿಯನ್ನ ರಾಷ್ಟ್ರ ಪ್ರಾಣಿಯನ್ನಾಗಿಸಿದ್ದು ಗೋವಿನ ದುಸ್ಥಿತಿಗೆ ಕಾರಣ. ಅದರ ಪರಿಣಾಮ ಇಂದು ದೇಶದಲ್ಲಿ ರಕ್ತಪಾತ, ಮತಾಂತರಗಳಂತಹ ದುಷ್ಕೃತ್ಯಗಳು ನಿರಂತರವಾಗಿವೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಆರೆಸ್ಸೆಸ್ ಪ್ರಮುಖ್ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಗುರುವಾರ ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಗೋಶಾಲೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಹುಲಿಯನ್ನ ರಾಷ್ಟ್ರ ಪ್ರಾಣಿ ಅಂದಾಕ್ಷಣ ಅದನ್ನ ಆರತಿ ಎತ್ತಿ ಪೂಜೆ ಮಾಡಲು ಸಾಧ್ಯವೇ ? ತಾಯಿ ಸಮಾನ ಗೋವಿಗೆ ಮಾತ್ರ ಆ ಪೂಜೆ ಸಲ್ಲಲು ಸಾಧ್ಯ. ಜಾತ್ಯತೀತ ಚಿಂತನೆಯಲ್ಲಿ ಹುಲಿಯನ್ನ ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಿದ್ದಾರೆಯೇ ಹೊರತು ಅದರ ಮೇಲಿನ ಪ್ರೀತಿಯಿಂದಲ್ಲ. ಭಾರತದ ಜನ ಹೆಚ್ಚು ಪ್ರೀತಿಸಿ ಸಾಕಿದ್ದು ದನವನ್ನು. ಸಾವಿರಾರು ವರ್ಷದಿಂದಲೂ ಗೋವು ನಮ್ಮ ಪೂಜನೀಯ ರಾಷ್ಟ್ರ ಪ್ರಾಣಿಯಾಗಿದೆ ಎಂದರು.

ನಾವಿಂದು ಪುರಾಣದ ಬಕಾಸುರನ ಸಾಮ್ರಾಜ್ಯದ ಹಿಂದೂಗಳಾಗಿದ್ದೇವೆ. ಬಕಾಸುರರ ಆಹಾರಕ್ಕಾಗಿ ನಾವೇ ಖುದ್ದು ನಿತ್ಯ ನಿರಂತರ ಗೋವನ್ನ ಒದಗಿಸುತ್ತಿದ್ದೇವೆ. ನಾವೆಲ್ಲ ವಾಸ್ತವ ಅರಿತು ಎಚ್ಚೆತ್ತುಕೊಂಡು ಗೋವಿನ ರಕ್ಷಣೆಗೆ ಸದೃಢ ಹಿಂದು ಸಮಾಜ ಕಟ್ಟಬೇಕಿದೆ. ಸ್ವದೇಶಿ ಹಸುವಿನ ಹಾಲಿಗಿಂತ ಶ್ರೇಷ್ಠ ಯಾವುದೂ ಇಲ್ಲ. ಅದು ತಾಯಿಯ ಎದೆ ಹಾಲಿನ ಸಮಾನವಾಗಿದ್ದು , ಸ್ವದೇಶಿ ಹಸುಗಳ ವೃದ್ಧಿಗೆ ಶ್ರಮಿಸುತ್ತಿರುವ ಅಮೃತಧಾರ ಗೋಶಾಲೆಯ ಬಗ್ಗೆ ಪ್ರಭಾಕರ ಭಟ್ ಪ್ರಶಂಸೆ ವ್ಯಕ್ತ ಪಡಿಸಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಮುಖರಾದ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದು, ಸೇವಾ ಮನೋಭಾವ ಬೆಳೆಸಿಕೊಂಡಿರುವ ರಾಜಾರಾಂ ಭಟ್ ಅವರು ಗೋ ಸೇವೆಯ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅಧ್ಯಕ್ಷತೆ ವಹಿಸಿದ್ದರು. ಮಾತಾ ಡೆವಲಪರ್ಸ್ ನ ಮಾಲಕರಾದ ಸಂತೋಷ್ ಶೆಟ್ಟಿ, ಹವ್ಯಕ ಸಂಘದ ಅಧ್ಯಕ್ಷ ನಾಗರಾಜ ಭಟ್ , ಹಿಂದು ಸಂಘಟನೆ ಮುಖಂಡರಾದ ಗಣೇಶ್ ಕೆದಿಲ, ಮಿಥುನ್ ಕಲ್ಲಡ್ಕ, ವಿಜಿತ್ ಶೆಟ್ಟಿ ಉಪಸ್ಥಿತರಿದ್ದರು. ಗೋಶಾಲೆಯ ಸಂಚಾಲಕರಾದ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿ,ಪ್ರಸ್ತಾವಿಸಿದರು.
Mangalore Our cows are slaughtered every day for the meal of Gluttons says Dr Kalladka Prabhakar Bhat speaking at Amruthadara Cow Ashram.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm