ಬ್ರೇಕಿಂಗ್ ನ್ಯೂಸ್
04-02-22 10:13 pm HK Desk news ಕರಾವಳಿ
ಬಂಟ್ವಾಳ, ಫೆ.4 : ಇತ್ತೀಚೆಗೆ ಮದುವೆ ಸಂಭ್ರಮದ ಮಧ್ಯೆ ಕೊರಗಜ್ಜನ ವೇಷ ಹೋಲುವಂತೆ ಬಟ್ಟೆ ತೊಟ್ಟು ವಿವಾದಕ್ಕೆ ಕಾರಣವಾಗಿದ್ದ ಮದುಮಗ ಉಪ್ಪಳ ನಿವಾಸಿ ಉಮರುಲ್ ಬಾಷಿತ್ ವಿದೇಶಕ್ಕೆ ಪಲಾಯನ ಮಾಡುವುದನ್ನು ತಿಳಿದು ಕೊಚ್ಚಿ ಏರ್ಪೋರ್ಟ್ ಬಳಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಬೇಕೂರು ನಿವಾಸಿಯಾಗಿರುವ ಉಮರುಲ್, ಜ.6 ರಂದು ಮದುವೆಯ ದಿನ ಸಾಲೆತ್ತೂರಿನ ವಧುವಿನ ಮನೆಗೆ ಬಂದಿದ್ದ ವೇಳೆ ಕೊರಗಜ್ಜನ ರೀತಿ ವೇಷ ತೊಟ್ಟು ಅಣಕಿಸುವಂತೆ ವರ್ತಿಸಿದ್ದ. ಈ ಬಗ್ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ಉಮರುಲ್ ಸ್ನೇಹಿತರಾದ ಅಹಮದ್ ಮುಜಿತಬ್ ಹಾಗೂ ಮೊಹಿಯುದ್ದೀನ್ ಮುನೀಸ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆಬಳಿಕ ಉಮರುಲ್ ಬಂಧನಕ್ಕೆ ಮುಂದಾಗಿದ್ದರು. ಆದರೆ ಉಮರುಲ್ ತಲೆಮರೆಸಿಕೊಂಡಿದ್ದ. ಇದೀಗ ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸಿ ಕೊಚ್ಚಿನ್ ಏರ್ಪೋರ್ಟ್ ಬಳಿಯ ನೆಡುಂಬಾಶ್ಶೇರಿ ಎಂಬಲ್ಲಿ ಅಡಗಿಕೊಂಡಿದ್ದ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ ವಿಟ್ಲ ಪೊಲೀಸರು, ಆರೋಪಿ ಉಮರುಲ್ ನನ್ನು ಬಂಧಿಸಿದ್ದಾರೆ. ಮದುವೆ ಸಂಭ್ರಮದಲ್ಲಿ ಕೊರಗಜ್ಜನ ರೀತಿ ವೇಷ ತೊಟ್ಟು ವಿಕೃತವಾಗಿ ವರ್ತಿಸಿದ್ದ ವಿಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು.
It is learnt that Umarul Bashith, main accused in the case relating to mockery of Tulunadu Daiva Koragajja by a group of youths belonging to other community, is arrested by airport officials of Nadumban Cheri at Kochi in Kerala.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm