ಬ್ರೇಕಿಂಗ್ ನ್ಯೂಸ್
05-02-22 02:14 pm HK Desk news ಕರಾವಳಿ
ಪುತ್ತೂರು, ಫೆ.5 : ಹಿರಿಯ ಪತ್ರಕರ್ತ, ಪುತ್ತೂರಿನಲ್ಲಿ ಉದಯವಾಣಿ ಪತ್ರಿಕೆಯನ್ನು ಜನಪ್ರಿಯರಾಗಿಸಿದ್ದ ಬಿ.ಟಿ ರಂಜನ್ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಕಾರಣ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ವಿವಿಧ ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಮುಂಗಾರು ಪತ್ರಿಕೆಯಿಂದ ಕೆಲಸ ಆರಂಭಿಸಿ, ಬಳಿಕ ಹೊಸದಿಗಂತ, ಆನಂತರ ಉದಯವಾಣಿ ಸೇರಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್, ಅದರಲ್ಲಿ ಸುದೀರ್ಘ 26 ವರ್ಷ ಕಾಲ ದುಡಿದಿದ್ದರು. ಪುತ್ತೂರು ಸುದಿನ ಪುಟದ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು. ಉದಯವಾಣಿ ಪುತ್ತೂರಿನಲ್ಲಿ ಪ್ರಸಾರ ಹೆಚ್ಚಿಸಲು ಮತ್ತು ಜನಮನ ಮುಟ್ಟುವಲ್ಲಿ ರಂಜನ್ ಬರಹಗಳು ಕಾರಣವಾಗಿದ್ದವು.
2017ರಲ್ಲಿ ಉದಯವಾಣಿಯಿಂದ ನಿವೃತ್ತರಾಗಿದ್ದ ರಂಜನ್, ಆಬಳಿಕ ಹೊಸದಿಗಂತ ಪತ್ರಿಕೆಗೆ ವರದಿಗಾರರಾಗಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ರಂಜನ್ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಕ್ಕೂ ಹೆಚ್ಚಿನ ಪತ್ರಿಕಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.
Puttur Senior Journalist B T Ranjan passes away at 60. Since two to there days he was suffering from Cold and Cough but he breathed his last at Puttur Hospital.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm