ಬ್ರೇಕಿಂಗ್ ನ್ಯೂಸ್
05-02-22 02:14 pm HK Desk news ಕರಾವಳಿ
ಪುತ್ತೂರು, ಫೆ.5 : ಹಿರಿಯ ಪತ್ರಕರ್ತ, ಪುತ್ತೂರಿನಲ್ಲಿ ಉದಯವಾಣಿ ಪತ್ರಿಕೆಯನ್ನು ಜನಪ್ರಿಯರಾಗಿಸಿದ್ದ ಬಿ.ಟಿ ರಂಜನ್ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಕಾರಣ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ವಿವಿಧ ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಮುಂಗಾರು ಪತ್ರಿಕೆಯಿಂದ ಕೆಲಸ ಆರಂಭಿಸಿ, ಬಳಿಕ ಹೊಸದಿಗಂತ, ಆನಂತರ ಉದಯವಾಣಿ ಸೇರಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್, ಅದರಲ್ಲಿ ಸುದೀರ್ಘ 26 ವರ್ಷ ಕಾಲ ದುಡಿದಿದ್ದರು. ಪುತ್ತೂರು ಸುದಿನ ಪುಟದ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು. ಉದಯವಾಣಿ ಪುತ್ತೂರಿನಲ್ಲಿ ಪ್ರಸಾರ ಹೆಚ್ಚಿಸಲು ಮತ್ತು ಜನಮನ ಮುಟ್ಟುವಲ್ಲಿ ರಂಜನ್ ಬರಹಗಳು ಕಾರಣವಾಗಿದ್ದವು.
2017ರಲ್ಲಿ ಉದಯವಾಣಿಯಿಂದ ನಿವೃತ್ತರಾಗಿದ್ದ ರಂಜನ್, ಆಬಳಿಕ ಹೊಸದಿಗಂತ ಪತ್ರಿಕೆಗೆ ವರದಿಗಾರರಾಗಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ರಂಜನ್ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಕ್ಕೂ ಹೆಚ್ಚಿನ ಪತ್ರಿಕಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.
Puttur Senior Journalist B T Ranjan passes away at 60. Since two to there days he was suffering from Cold and Cough but he breathed his last at Puttur Hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm