ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm