ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm