ಬ್ರೇಕಿಂಗ್ ನ್ಯೂಸ್
12-02-22 11:29 am Mangalore Correspondent ಕರಾವಳಿ
ಮಂಗಳೂರು, ಫೆ.11 : ಸುರತ್ಕಲ್ ಬಳಿ ಟೋಲ್ ಗೇಟ್ ಹೆಸರಲ್ಲಿ ಜನರನ್ನು ಲೂಟಿ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಟೋಲ್ ಗೇಟ್ ಮುಂದೆಯೇ ವಿಭಿನ್ನ ರೀತಿಯ ಪ್ರತಿಭಟನೆ ಆರಂಭಿಸಲಾಗಿದೆ. ಸ್ಥಳೀಯವಾಗಿ ಆಪತ್ಬಾಂಧವ ಎಂದೇ ಹೆಸರಾಗಿರುವ ಆಸಿಫ್ ಮೂಲ್ಕಿ ನೇತೃತ್ವದಲ್ಲಿ ವಿಭಿನ್ನ ಪ್ರತಿಭಟನೆ ಆರಂಭಗೊಂಡಿದ್ದು, ಲೂಟಿಕೋರರ ಪರ ನಿಂತಿರುವ ಜನಪ್ರತಿನಿಧಿಗಳು ಮತ್ತು ಆಡಳಿತ ವ್ಯವಸ್ಥೆಯನ್ನು ಅಣಕಿಸುವ ರೀತಿ ವಿನೂತನ ಪ್ರತಿಭಟನೆ ನಡೆದಿದೆ.
ಲೂಟಿಕೋರರಿಂದ ತಪ್ಪಿಸಲು ಕೆಸರು ಮಣ್ಣಿನಲ್ಲಿ ಅವಿತುಕೊಂಡು ಕುಳಿತಿರುವ ಗ್ರಾಹಕನ ರೀತಿ ಬಿಂಬಿಸುವ ಯತ್ನದಲ್ಲಿ ಆಸಿಫ್ ಅವರು ಮೈಗೆ ಪೂರ್ತಿ ಮಣ್ಣನ್ನು ಮೆತ್ತಿಕೊಂಡು ಕೆಸರು ನೀರಿನಲ್ಲಿ ಮಲಗಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿದೆ. ಟೋಲ್ ಗೇಟ್ ಕೇಂದ್ರದ ಬಳಿಯಲ್ಲೇ ರಸ್ತೆ ಬದಿ ಮಣ್ಣನ್ನು ತಂದು ಹಾಕಿ, ಅದರಲ್ಲೇ ಕೆಸರು ಸೃಷ್ಟಿಸಿ ಅದರೊಳಗೆ ಕುಳಿತಿರುವ ಆಸಿಫ್ ಅವರು ಇಲ್ಲಿನ ಲೂಟಿ ಕೇಂದ್ರದ ಬಗ್ಗೆ ಫೇಸ್ಬುಕ್ ನಲ್ಲಿಯೇ ಲೈವ್ ಬಂದು ಜನರು ಮತ್ತು ಆಡಳಿತಕ್ಕೆ ಜಾಗೃತಿ ಮೂಡಿಸಿದ್ದಾರೆ.




ಶುಕ್ರವಾರ ಸಂಜೆ ರಸ್ತೆ ಬದಿ ಸ್ವತಃ ಶವದ ರೀತಿ ಮಲಗಿ ವ್ಯವಸ್ಥೆಯನ್ನು ಮತ್ತೊಂದು ರೀತಿಯಲ್ಲಿ ಅಣಕಿಸಿದ್ದಾರೆ. ಟೋಲ್ ಗೇಟ್ ನಲ್ಲಿ ರೌಡಿಗಳಿಂದ ಹಲ್ಲೆಗೆ ಒಳಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದರೂ, ನ್ಯಾಯ ಸಿಗದೆ ಕೊನೆಗೆ ಸಾವಿಗೆ ಶರಣಾಗಿರುವ ಗ್ರಾಹಕನ ರೀತಿ ಬಿಂಬಿಸಿ, ಶವದ ರೂಪದಲ್ಲಿ ಮಲಗಿರುವುದನ್ನು ತೋರಿಸಲಾಗಿತ್ತು. ಸುರತ್ಕಲ್ ಟೋಲ್ ಗೇಟ್ ನಾಲ್ಕು ವರ್ಷಗಳ ಹಿಂದೆ ತಾತ್ಕಾಲಿಕ ನೆಪದಲ್ಲಿ ಆರಂಭಿಸಲಾಗಿತ್ತು. ಆದರೆ ಹೆಜಮಾಡಿ ಟೋಲ್ ಗೇಟ್ ಆರಂಭಗೊಂಡ ಬಳಿಕ ಇದನ್ನು ನಿಲ್ಲಿಸಲಾಗುವುದು ಎಂದು ಹೆದ್ದಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಿಳಿಸಿದ್ದರು.



ಎರಡು ವರ್ಷಗಳ ಹಿಂದೆ ಹೆಜಮಾಡಿ ಟೋಲ್ ಗೇಟ್ ಆರಂಭಗೊಂಡರೂ, ಸುರತ್ಕಲ್ ಟೋಲ್ ನಿಲ್ಲಿಸಲಿಲ್ಲ. ಟೋಲ್ ಗೇಟ್ ಸ್ಥಗಿತಗೊಳಿಸುವ ಬದಲು ಜನರನ್ನು ಲೂಟಿ ಮಾಡುವುದಕ್ಕಾಗಿಯೇ ಎರಡು ತಿಂಗಳ ಹಿಂದೆ ಮತ್ತೆ ಮೂರು ತಿಂಗಳ ಮಟ್ಟಿಗೆ ಲೈಸನ್ಸ್ ನವೀಕರಣ ಮಾಡಲಾಗಿತ್ತು. 15 ಕಿಮೀ ನಡುವೆ ಎರಡೆರಡು ಕಡೆ ಟೋಲ್ ಕಟ್ಟುವ ಸ್ಥಿತಿ ಗ್ರಾಹಕರದ್ದಾಗಿದ್ದು, ಜನರನ್ನು ಹಗಲು ದರೋಡೆ ಮಾಡಲಾಗುತ್ತಿದೆ. ಶಾಸಕರು, ಸಂಸದರ ಕೃಪೆಯಿಂದಲೇ ಈ ರೀತಿಯ ಲೂಟಿ ನಡೆಯುತ್ತಿದೆ ಅನ್ನುವ ಗಂಭೀರ ಆರೋಪ ಇದ್ದರೂ, ಜನಪ್ರತಿನಿಧಿಗಳು ಮೌನವಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಟೋಲ್ ವಿರೋಧಿಸಿ ವಿಶಿಷ್ಚ ರೀತಿಯ ಪ್ರತಿಭಟನೆ ನಿರಂತರ ಇರಲಿದ್ದು, ಪ್ರತಿದಿನ ವಿಶೇಷ ರೀತಿಯಲ್ಲಿ ಪ್ರತಿಭಟಿಸಲಾಗುವುದು ಎಂದು ಆಸಿಫ್ ತಿಳಿಸಿದ್ದಾರೆ.
Mangalore Surathkal toll illegal social activist Asif Apathbandava commits suicide protests for cancellation of tender. Speaking to Headline Karnataka he urged that the toll tender must be cancelled. He also sought transfer of national highway infrastructure to the respective state governments. Deeming toll plazas on national highways as an affront to federal structure of the country.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm