ಬ್ರೇಕಿಂಗ್ ನ್ಯೂಸ್
12-02-22 01:35 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12 : ಮರಳು ಮಾಫಿಯಾದಲ್ಲಿ ಕಮಿಷನ್ ಪಡೆದ ಆರೋಪದಲ್ಲಿ ಆಣೆ ಪ್ರಮಾಣದ ಸವಾಲು ಸ್ವೀಕರಿಸಿದ್ದ ಶಾಸಕ ಹರತಾಳು ಹಾಲಪ್ಪ ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿದ್ದಾರೆ.
ಆರೋಪ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಇಬ್ಬರು ಕೂಡ ಇಂದು ಧರ್ಮಸ್ಥಳಕ್ಕೆ ಬರುತ್ತಾರೆ ಎನ್ನಲಾಗಿತ್ತು. ಇಂದು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಮಾತ್ರ ಧರ್ಮಸ್ಥಳಕ್ಕೆ ಬಂದಿದ್ದು ಮಂಜುನಾಥನ ದರ್ಶನ ಪಡೆದು ಆಣೆ ಪ್ರಮಾಣ ಮಾಡಿದ್ದಾರೆ. ಬೆಂಬಲಿಗರ ಜೊತೆ ದೇವರ ದರ್ಶನ ಪಡೆದು ದೇವರ ಎದುರೇ ಆಣೆ ಮಾಡಿದ್ದಾಗಿ ಶಾಸಕ ಹಾಲಪ್ಪ ಹೇಳಿಕೊಂಡಿದ್ದಾರೆ. ಆದರೆ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಬರದೆ ದೂರ ಉಳಿದಿದ್ದಾರೆ.

ಮರಳು ಮಾಫಿಯಾದಿಂದ ತಾನಾಗಲಿ, ತನ್ನ ಸಂಗಡಿಗರಾಗಲಿ ಕಮಿಷನ್ ಪಡೆದಿಲ್ಲ. ಆದರೆ ಬೇಳೂರು ಗೋಪಾಲಕೃಷ್ಣ ವಿನಾಕಾರಣ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಬಳಿಕ ನನ್ನ ಜೊತೆಗಿರುವ ವಿನಾಯಕ ರಾವ್ ಮತ್ತು ಬಿ.ಟಿ ರವೀಂದ್ರ ಬಗ್ಗೆ ಆರೋಪ ಮಾಡಿದ್ದರು. ಈಗ ನಾವು ಎಲ್ಲ ಜೊತೆಗೆ ಬಂದು ಆಣೆ ಮಾಡಿ ಹೇಳಿದ್ದೇವೆ. ಮಾಜಿ ಶಾಸಕರ ಸವಾಲನ್ನು ಸ್ವೀಕರಿಸಿ ಫೆ.12 ರಂದು ಧರ್ಮಸ್ಥಳಕ್ಕೆ ತೆರಳುತ್ತಿರುವುದಾಗಿ ಮಾಧ್ಯಮದಲ್ಲಿ ಪ್ರಕಟಣೆ ಕೊಟ್ಟಿದ್ದೆ. ಆದರೆ ನನಗೆ ಆಣೆ ಪ್ರಮಾಣದ ಸವಾಲು ಹಾಕಿ ಅವರು ಈಗ ಪಲಾಯನ ಮಾಡುತ್ತಿದ್ದಾರೆ. ಈಗ ಗೋವಾ ಚುನಾವಣೆಯ ಸುಬೂಬು ಹೇಳ್ತಾ ಇದ್ದಾರೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿದವರು ಈಗ ಧರ್ಮಸ್ಥಳಕ್ಕೆ ಬರಲಿ. ದೇವರೆದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ. ಅವರೂ ಬಂದು ಮಾಡಲಿ ಎಂದು ಹರತಾಳು ಹಾಲಪ್ಪ ಹೇಳಿದ್ದಾರೆ.
Sand Commision, Halappa Harathalu visits Dharmasthala temple by taking oath as he challenged of doing it.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm