ಬ್ರೇಕಿಂಗ್ ನ್ಯೂಸ್
13-02-22 07:42 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.13 : ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು ಆತ್ಮ ಹತ್ಯೆಗೈದ ಘಟನೆ ಭಾನುವಾರ ನಡೆದಿದೆ.
ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ಯುವಕ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ ಚಾಲಕನಾಗಿದ್ದ ಭಾಸ್ಕರ್ ಶನಿವಾರ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದ. ಭಾಸ್ಕರನಿಗೆ ಆತನ ಅಣ್ಣ ಲೋಕೇಶ್ ನಾಯಕ್ ತಾನು ಬ್ಯಾಂಕಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ ತರಲು 20,000 ರೂಪಾಯಿಗಳನ್ನ ನೀಡಿದ್ದನಂತೆ. ಆದರೆ ರಾತ್ರಿಯಿಡೀ ಭಾಸ್ಕರ್ ಸುಳಿವೇ ಇಲ್ಲದ ಕಾರಣ ಮನೆ ಮಂದಿ ಗಾಬರಿಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಗ್ಗೆ ಮನೆಯ ಮಂಚದ ದಿಂಬಿನ ಅಡಿಯಲ್ಲಿ 20,000 ರೂಪಾಯಿ ಪತ್ತೆಯಾಗಿದೆ.


ಇಂದು ಸಂಜೆ ಭಾಸ್ಕರ್ ಮೃತದೇಹ ಸೋಮೇಶ್ವರ ರುದ್ರಪಾದೆಯ ಕಡಲ ತೀರದಲ್ಲಿ ತೇಲುತ್ತಿದ್ದು ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಅವರು ಮೃತದೇಹವನ್ನ ಎಳೆದು ತೀರಕ್ಕೆ ಹಾಕಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಭಾಸ್ಕರ್ ಅವಿವಾಹಿತರಾಗಿದ್ದು ತಾಯಿ, ಅಣ್ಣನನ್ನ ಅಗಲಿದ್ದಾರೆ. ಆತ್ಮಹತ್ಯೆಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಕೆಲವು ಸಮಯದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore 32 year old man commits suicide by drowning in sea at Someshwara, depression suspected. The deceased has been identified as Bhaskar Nayak a resident of Uchila.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm