ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm