ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm