ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm