ಬ್ರೇಕಿಂಗ್ ನ್ಯೂಸ್
16-02-22 09:05 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಗಡಿನಾಡು ಕಾಸರಗೋಡು ಜಿಲ್ಲೆಯ ಕುಗ್ರಾಮದಲ್ಲಿ ಬೆಳೆದ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದಲ್ಲಿ ಎಂಡಿಎಸ್ ವಿಭಾಗದಲ್ಲಿ ಮೊದಲ ರ್ಯಾಂಕಿನೊಂದಿಗೆ ಚಿನ್ನದ ಪದಕದ ಗಳಿಸಿದ್ದು ಮಹತ್ತರ ಸಾಧನೆ ಮಾಡಿದ್ದಾಳೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಬಳಿಯ ಕಾಡೂರು ಎಂಬ ಕುಗ್ರಾಮದ ನಿವಾಸಿಯಾಗಿರುವ ಡಾ. ಸೆಕೀಬಾ ಅಲಿ ಕಾಡೂರು ರಾಜೀವ ಗಾಂಧಿ ವಿವಿಯ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಎಂಡ್ ಎಂಡೋಡೋಂಟಿಕ್ಸ್ ವಿಷಯದಲ್ಲಿ ಎಂಡಿಎಸ್ ಪೂರೈಸಿದ್ದು ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ಬಿಡಿಎಸ್ ಅಧ್ಯಯನ ನಡೆಸಿದ್ದ ಸೆಕೀಬಾ, ಹಾಸನದ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿನಿಯಾಗಿದ್ದರು.
ಈಕೆ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡೂರಿನ ಮೊಹಮ್ಮದ್ ಅಲಿ ಮತ್ತು ಜೊಹರಾ ಅಲಿ ದಂಪತಿಯ ಪುತ್ರಿ. ಹುಟ್ಟೂರು ಕಾಡೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಆರಂಭಿಸಿದ್ದ ಸೆಕೀಬಾ, ಗಡಿಭಾಗದ ಕುರುಡಪದವು ಪ್ರೌಢಶಾಲೆಯಲ್ಲಿ ಹೈಸ್ಕೂಲ್, ಆನಂತರ ವಿಟ್ಲದ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದು ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಗಿಟ್ಟಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಕನ್ನಡ ಮಾಧ್ಯಮದಲ್ಲಿ ಕಲಿತ ಹೆಣ್ಮಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು ಗಮನಾರ್ಹ.
ಅಂದಹಾಗೆ, ಕರಾವಳಿಯ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ವೈದ್ಯಕೀಯ ಕ್ಷೇತ್ರದಲ್ಲಿ ಗೋಲ್ಡ್ ಮೆಡಲ್ ಸಾಧನೆ ಮಾಡಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಈಕೆಯ ಸಾಧನೆಗೆ ಹಾಸನಾಂಬ ಕಾಲೇಜಿನ ಪ್ರಾಂಶುಪಾಲರು, ಸಿಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಸಂತಸಗೊಂಡಿದ್ದಾರೆ.
Kasargod village girl Dr Sakiba Ali bags gold medal in MDS from RHGUS.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm