ಬ್ರೇಕಿಂಗ್ ನ್ಯೂಸ್
16-02-22 09:05 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಗಡಿನಾಡು ಕಾಸರಗೋಡು ಜಿಲ್ಲೆಯ ಕುಗ್ರಾಮದಲ್ಲಿ ಬೆಳೆದ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದಲ್ಲಿ ಎಂಡಿಎಸ್ ವಿಭಾಗದಲ್ಲಿ ಮೊದಲ ರ್ಯಾಂಕಿನೊಂದಿಗೆ ಚಿನ್ನದ ಪದಕದ ಗಳಿಸಿದ್ದು ಮಹತ್ತರ ಸಾಧನೆ ಮಾಡಿದ್ದಾಳೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಬಳಿಯ ಕಾಡೂರು ಎಂಬ ಕುಗ್ರಾಮದ ನಿವಾಸಿಯಾಗಿರುವ ಡಾ. ಸೆಕೀಬಾ ಅಲಿ ಕಾಡೂರು ರಾಜೀವ ಗಾಂಧಿ ವಿವಿಯ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಎಂಡ್ ಎಂಡೋಡೋಂಟಿಕ್ಸ್ ವಿಷಯದಲ್ಲಿ ಎಂಡಿಎಸ್ ಪೂರೈಸಿದ್ದು ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ಬಿಡಿಎಸ್ ಅಧ್ಯಯನ ನಡೆಸಿದ್ದ ಸೆಕೀಬಾ, ಹಾಸನದ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿನಿಯಾಗಿದ್ದರು.
ಈಕೆ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡೂರಿನ ಮೊಹಮ್ಮದ್ ಅಲಿ ಮತ್ತು ಜೊಹರಾ ಅಲಿ ದಂಪತಿಯ ಪುತ್ರಿ. ಹುಟ್ಟೂರು ಕಾಡೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಆರಂಭಿಸಿದ್ದ ಸೆಕೀಬಾ, ಗಡಿಭಾಗದ ಕುರುಡಪದವು ಪ್ರೌಢಶಾಲೆಯಲ್ಲಿ ಹೈಸ್ಕೂಲ್, ಆನಂತರ ವಿಟ್ಲದ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದು ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಗಿಟ್ಟಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಕನ್ನಡ ಮಾಧ್ಯಮದಲ್ಲಿ ಕಲಿತ ಹೆಣ್ಮಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು ಗಮನಾರ್ಹ.
ಅಂದಹಾಗೆ, ಕರಾವಳಿಯ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ವೈದ್ಯಕೀಯ ಕ್ಷೇತ್ರದಲ್ಲಿ ಗೋಲ್ಡ್ ಮೆಡಲ್ ಸಾಧನೆ ಮಾಡಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಈಕೆಯ ಸಾಧನೆಗೆ ಹಾಸನಾಂಬ ಕಾಲೇಜಿನ ಪ್ರಾಂಶುಪಾಲರು, ಸಿಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಸಂತಸಗೊಂಡಿದ್ದಾರೆ.
Kasargod village girl Dr Sakiba Ali bags gold medal in MDS from RHGUS.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm