ಬ್ರೇಕಿಂಗ್ ನ್ಯೂಸ್
16-02-22 09:05 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಗಡಿನಾಡು ಕಾಸರಗೋಡು ಜಿಲ್ಲೆಯ ಕುಗ್ರಾಮದಲ್ಲಿ ಬೆಳೆದ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದಲ್ಲಿ ಎಂಡಿಎಸ್ ವಿಭಾಗದಲ್ಲಿ ಮೊದಲ ರ್ಯಾಂಕಿನೊಂದಿಗೆ ಚಿನ್ನದ ಪದಕದ ಗಳಿಸಿದ್ದು ಮಹತ್ತರ ಸಾಧನೆ ಮಾಡಿದ್ದಾಳೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಬಳಿಯ ಕಾಡೂರು ಎಂಬ ಕುಗ್ರಾಮದ ನಿವಾಸಿಯಾಗಿರುವ ಡಾ. ಸೆಕೀಬಾ ಅಲಿ ಕಾಡೂರು ರಾಜೀವ ಗಾಂಧಿ ವಿವಿಯ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಎಂಡ್ ಎಂಡೋಡೋಂಟಿಕ್ಸ್ ವಿಷಯದಲ್ಲಿ ಎಂಡಿಎಸ್ ಪೂರೈಸಿದ್ದು ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ಬಿಡಿಎಸ್ ಅಧ್ಯಯನ ನಡೆಸಿದ್ದ ಸೆಕೀಬಾ, ಹಾಸನದ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿನಿಯಾಗಿದ್ದರು.
ಈಕೆ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡೂರಿನ ಮೊಹಮ್ಮದ್ ಅಲಿ ಮತ್ತು ಜೊಹರಾ ಅಲಿ ದಂಪತಿಯ ಪುತ್ರಿ. ಹುಟ್ಟೂರು ಕಾಡೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಆರಂಭಿಸಿದ್ದ ಸೆಕೀಬಾ, ಗಡಿಭಾಗದ ಕುರುಡಪದವು ಪ್ರೌಢಶಾಲೆಯಲ್ಲಿ ಹೈಸ್ಕೂಲ್, ಆನಂತರ ವಿಟ್ಲದ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದು ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಗಿಟ್ಟಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಕನ್ನಡ ಮಾಧ್ಯಮದಲ್ಲಿ ಕಲಿತ ಹೆಣ್ಮಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು ಗಮನಾರ್ಹ.
ಅಂದಹಾಗೆ, ಕರಾವಳಿಯ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ವೈದ್ಯಕೀಯ ಕ್ಷೇತ್ರದಲ್ಲಿ ಗೋಲ್ಡ್ ಮೆಡಲ್ ಸಾಧನೆ ಮಾಡಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಈಕೆಯ ಸಾಧನೆಗೆ ಹಾಸನಾಂಬ ಕಾಲೇಜಿನ ಪ್ರಾಂಶುಪಾಲರು, ಸಿಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಸಂತಸಗೊಂಡಿದ್ದಾರೆ.
Kasargod village girl Dr Sakiba Ali bags gold medal in MDS from RHGUS.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm