ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm